<p><strong>ಬೀದರ್</strong>: ದಿ. ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಳ್ಳಿ ಅವರು ಜಿಲ್ಲೆ ಹಾಗೂ ಸಹಕಾರ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಚಲನಚಿತ್ರ ನಟ ಶಿವರಾಜಕುಮಾರ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ನಗರದ ಪ್ರತಾಪನಗರದ ಡಿಸಿಸಿ ಬ್ಯಾಂಕ್ನ ಶಾರದಾ ತರಬೇತಿ ಕೇಂದ್ರಕ್ಕೆ ಪತ್ನಿ ಗೀತಾ ಅವರೊಂದಿಗೆ ಭೇಟಿ ನೀಡಿ ಅವರು ಮಾತನಾಡಿದರು.</p>.<p>ಸೂರ್ಯಕಾಂತ ನಾಗಮಾರಪಳ್ಳಿ ಅವರು ನನಗೆ ಸಹೋದರ ಇದ್ದ ಹಾಗೆ. ಅಪ್ಪುನ ಎಲ್ಲ ಗುಣಗಳು ಅವರಲ್ಲಿ ಇವೆ ಎಂದು ಹೇಳಿದರು.<br />ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಮಾತನಾಡಿ, ಸಹಾರ್ದ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದ ಎಲ್ಲ ಅಭ್ಯರ್ಥಿಗಳು ಸುಖಕರ ಜೀವನ ನಡೆಸುತ್ತಿದ್ದಾರೆ ಎಂದು ತಿಳಿಸಿದರು.</p>.<p>ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿ ಸೂಪರ್ ಸ್ಪೇಷಾಲಿಟಿ ಸಹಕಾರ ಆಸ್ಪತ್ರೆಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಮಾತನಾಡಿ, ಅಣ್ಣನವರ ಕುಟುಂಬವನ್ನು ನಾನು ಬಹಳ ಹತ್ತಿರದಿಂದ ನೋಡಿದ್ದೇನೆ. ಪುನೀತ್ ರಾಜಕುಮಾರ ಅವರು ಹಿಂದೆ ನಮ್ಮ ಸಂಸ್ಥೆಗಳಿಗೆ ಭೇಟಿ ಕೊಟ್ಟಿದ್ದರು ಎಂದು ಸ್ಮರಿಸಿದರು.</p>.<p>ಇದೇ ವೇಳೆ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಷನ್ ವತಿಯಿಂದ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ಶಿವರಾಜಕುಮಾರ ದಂಪತಿ ಹೊಲಿಗೆ ಯಂತ್ರ, ಸೀರೆ ಹಾಗೂ ಮೆಕಪ್ ಕಿಟ್ಗಳನ್ನು ವಿತರಿಸಿದರು.</p>.<p>ಡಾ. ಗುರುಪಾದಪ್ಪ ನಾಗಮಾರಪಳ್ಳಿ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಸದಸ್ಯರಾದ ಶಿವಕುಮಾರ ಕಟ್ಟೆ, ಬಾಬುರಾವ್ ದಾನಿ, ಅಶೋಕ ಮಹಾಲಿಂಗ, ವಿಜಯಕುಮಾರ ಹೂಗಾರ, ಜುಬೇರ್ ದೈಮಿ, ಅಣ್ಣೆಪ್ಪ ಪಾಟೀಲ ಅವರು ಶಿವರಾಜಕುಮಾರ ದಂಪತಿಗೆ ಬೃಹತ್ ಹೂಮಾಲೆ ಹಾಕಿ ಗೌರವಿಸಿದರು.</p>.<p>ಮಾಜಿ ಶಾಸಕ ಅಶೋಕ ಖೇಣಿ, ಭೀಮರಾವ್, ಪಾಟೀಲ ಡಿಗ್ಗಿ, ಮಾಧವರಾವ್ ಪಾಟೀಲ, ಜಿ.ಎನ್. ಸಹಕಾರ ಆಸ್ಪತ್ರೆಯ ನಿರ್ದೇಶಕ ತರುಣ ನಾಗಮಾರಪಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ದಿ. ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಳ್ಳಿ ಅವರು ಜಿಲ್ಲೆ ಹಾಗೂ ಸಹಕಾರ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಚಲನಚಿತ್ರ ನಟ ಶಿವರಾಜಕುಮಾರ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ನಗರದ ಪ್ರತಾಪನಗರದ ಡಿಸಿಸಿ ಬ್ಯಾಂಕ್ನ ಶಾರದಾ ತರಬೇತಿ ಕೇಂದ್ರಕ್ಕೆ ಪತ್ನಿ ಗೀತಾ ಅವರೊಂದಿಗೆ ಭೇಟಿ ನೀಡಿ ಅವರು ಮಾತನಾಡಿದರು.</p>.<p>ಸೂರ್ಯಕಾಂತ ನಾಗಮಾರಪಳ್ಳಿ ಅವರು ನನಗೆ ಸಹೋದರ ಇದ್ದ ಹಾಗೆ. ಅಪ್ಪುನ ಎಲ್ಲ ಗುಣಗಳು ಅವರಲ್ಲಿ ಇವೆ ಎಂದು ಹೇಳಿದರು.<br />ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಮಾತನಾಡಿ, ಸಹಾರ್ದ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದ ಎಲ್ಲ ಅಭ್ಯರ್ಥಿಗಳು ಸುಖಕರ ಜೀವನ ನಡೆಸುತ್ತಿದ್ದಾರೆ ಎಂದು ತಿಳಿಸಿದರು.</p>.<p>ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿ ಸೂಪರ್ ಸ್ಪೇಷಾಲಿಟಿ ಸಹಕಾರ ಆಸ್ಪತ್ರೆಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಮಾತನಾಡಿ, ಅಣ್ಣನವರ ಕುಟುಂಬವನ್ನು ನಾನು ಬಹಳ ಹತ್ತಿರದಿಂದ ನೋಡಿದ್ದೇನೆ. ಪುನೀತ್ ರಾಜಕುಮಾರ ಅವರು ಹಿಂದೆ ನಮ್ಮ ಸಂಸ್ಥೆಗಳಿಗೆ ಭೇಟಿ ಕೊಟ್ಟಿದ್ದರು ಎಂದು ಸ್ಮರಿಸಿದರು.</p>.<p>ಇದೇ ವೇಳೆ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಷನ್ ವತಿಯಿಂದ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ಶಿವರಾಜಕುಮಾರ ದಂಪತಿ ಹೊಲಿಗೆ ಯಂತ್ರ, ಸೀರೆ ಹಾಗೂ ಮೆಕಪ್ ಕಿಟ್ಗಳನ್ನು ವಿತರಿಸಿದರು.</p>.<p>ಡಾ. ಗುರುಪಾದಪ್ಪ ನಾಗಮಾರಪಳ್ಳಿ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಸದಸ್ಯರಾದ ಶಿವಕುಮಾರ ಕಟ್ಟೆ, ಬಾಬುರಾವ್ ದಾನಿ, ಅಶೋಕ ಮಹಾಲಿಂಗ, ವಿಜಯಕುಮಾರ ಹೂಗಾರ, ಜುಬೇರ್ ದೈಮಿ, ಅಣ್ಣೆಪ್ಪ ಪಾಟೀಲ ಅವರು ಶಿವರಾಜಕುಮಾರ ದಂಪತಿಗೆ ಬೃಹತ್ ಹೂಮಾಲೆ ಹಾಕಿ ಗೌರವಿಸಿದರು.</p>.<p>ಮಾಜಿ ಶಾಸಕ ಅಶೋಕ ಖೇಣಿ, ಭೀಮರಾವ್, ಪಾಟೀಲ ಡಿಗ್ಗಿ, ಮಾಧವರಾವ್ ಪಾಟೀಲ, ಜಿ.ಎನ್. ಸಹಕಾರ ಆಸ್ಪತ್ರೆಯ ನಿರ್ದೇಶಕ ತರುಣ ನಾಗಮಾರಪಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>