ಸಂಜೆ 6ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗಣ್ಯರಿಗೆ ನಾಗಯ್ಯ ಸ್ವಾಮಿ ಸೇವಾ ರತ್ನ ಪ್ರಶಸ್ತಿ ಪ್ರದಾನ, ರಾತ್ರಿ ಸಂಗೀತ ಕಲಾವಿದರಿಂದ ಭಜನಾ ಸಂಗೀತ ಕಾರ್ಯಕ್ರಮ ನಡೆಯುತ್ತದೆ. ಮರುದಿನ ಬೆಳಿಗ್ಗೆ ಕಲಾವಿದರಿಗೆ ಸಂಸ್ಥೆಯಿಂದ ಸನ್ಮಾನ ಪತ್ರ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಗುತ್ತದೆ ಎಂದು ಸಂಸ್ಥೆಯ ಅಧ್ಯಕ್ಷೆ ಮಾತೆ ಸಂಗಮ್ಮ ಮಠಪತಿ ತಿಳಿಸಿದ್ದಾರೆ.