<p><strong>ಬಸವಕಲ್ಯಾಣ:</strong> ‘ಬ್ರಹ್ಮರ್ಷಿ ನಾರಾಯಣಗುರು ಅವರು ಯಾವುದೇ ಭೇದಭಾವ ಮಾಡದೆ ಎಲ್ಲರದ್ದು ಒಂದೇ ಜಾತಿ, ಒಂದೇ ಧರ್ಮ ಎಂದು ಸಾರಿದ್ದಾರೆ’ ಎಂದು ತಾಲ್ಲೂಕು ಆರ್ಯ ಈಡಿಗ ಸಮಾಜ ಸಂಘದ ಅಧ್ಯಕ್ಷ ರವೀಂದ್ರಕುಮಾರ ಬೋರೋಳೆ ಹೇಳಿದ್ದಾರೆ.</p>.<p>ತಾಲ್ಲೂಕು ಆರ್ಯ ಈಡಿಗ ಸಮಾಜ ಸಂಘದಿಂದ ಬುಧವಾರ ಇಲ್ಲಿ ಆಯೋಜಿಸಿದ್ದ ಬ್ರಹ್ಮರ್ಷಿ ನಾರಾಯಣಗುರು ಅವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಮಾಜ ಬಾಂಧವರು ಮಕ್ಕಳಿಗೆ ಶಿಕ್ಷಣ ನೀಡಿ ಪ್ರಗತಿಯ ದಾರಿಯಲ್ಲಿ ಸಾಗಬೇಕು. ಕೋವಿಡ್ ಕಾರಣ ಜಯಂತಿಯನ್ನು ಸರಳವಾಗಿ ಅಚರಿಸಲಾಗುತ್ತಿದೆ’ ಎಂದರು.</p>.<p>ಸಮಾಜ ಸಂಘದ ನಗರ ಘಟಕದ ಅಧ್ಯಕ್ಷ ಸಂತೋಷ ಗುತ್ತೇದಾರ ಮಾತನಾಡಿ, ‘ನಾರಾಯಣಗುರು ಹಾಗೂ ಇತರೆ ಮಹಾತ್ಮರ ಸಂದೇಶದ ಪಾಲನೆ ಮಾಡಬೇಕು’ ಎಂದರು.</p>.<p>ನಗರಸಭೆ ಆಯುಕ್ತ ಗೌತಮ ಕಾಂಬಳೆ, ಸದಸ್ಯ ರಾಮ ಜಾಧವ, ಸುಶೀಲ ಮುತ್ತೆ, ಅಶೋಕ ತೆಲಂಗ್, ಗುಂಡಣ್ಣ ಬೋರೋಳೆ, ಸಾಗರ ಮುತ್ತೆ, ನಿತೀನ್ ತೆಲಂಗ್, ವಿಕ್ಕಿ ಬೋರೋಳೆ ಮುಂತಾದವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ:</strong> ‘ಬ್ರಹ್ಮರ್ಷಿ ನಾರಾಯಣಗುರು ಅವರು ಯಾವುದೇ ಭೇದಭಾವ ಮಾಡದೆ ಎಲ್ಲರದ್ದು ಒಂದೇ ಜಾತಿ, ಒಂದೇ ಧರ್ಮ ಎಂದು ಸಾರಿದ್ದಾರೆ’ ಎಂದು ತಾಲ್ಲೂಕು ಆರ್ಯ ಈಡಿಗ ಸಮಾಜ ಸಂಘದ ಅಧ್ಯಕ್ಷ ರವೀಂದ್ರಕುಮಾರ ಬೋರೋಳೆ ಹೇಳಿದ್ದಾರೆ.</p>.<p>ತಾಲ್ಲೂಕು ಆರ್ಯ ಈಡಿಗ ಸಮಾಜ ಸಂಘದಿಂದ ಬುಧವಾರ ಇಲ್ಲಿ ಆಯೋಜಿಸಿದ್ದ ಬ್ರಹ್ಮರ್ಷಿ ನಾರಾಯಣಗುರು ಅವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಮಾಜ ಬಾಂಧವರು ಮಕ್ಕಳಿಗೆ ಶಿಕ್ಷಣ ನೀಡಿ ಪ್ರಗತಿಯ ದಾರಿಯಲ್ಲಿ ಸಾಗಬೇಕು. ಕೋವಿಡ್ ಕಾರಣ ಜಯಂತಿಯನ್ನು ಸರಳವಾಗಿ ಅಚರಿಸಲಾಗುತ್ತಿದೆ’ ಎಂದರು.</p>.<p>ಸಮಾಜ ಸಂಘದ ನಗರ ಘಟಕದ ಅಧ್ಯಕ್ಷ ಸಂತೋಷ ಗುತ್ತೇದಾರ ಮಾತನಾಡಿ, ‘ನಾರಾಯಣಗುರು ಹಾಗೂ ಇತರೆ ಮಹಾತ್ಮರ ಸಂದೇಶದ ಪಾಲನೆ ಮಾಡಬೇಕು’ ಎಂದರು.</p>.<p>ನಗರಸಭೆ ಆಯುಕ್ತ ಗೌತಮ ಕಾಂಬಳೆ, ಸದಸ್ಯ ರಾಮ ಜಾಧವ, ಸುಶೀಲ ಮುತ್ತೆ, ಅಶೋಕ ತೆಲಂಗ್, ಗುಂಡಣ್ಣ ಬೋರೋಳೆ, ಸಾಗರ ಮುತ್ತೆ, ನಿತೀನ್ ತೆಲಂಗ್, ವಿಕ್ಕಿ ಬೋರೋಳೆ ಮುಂತಾದವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>