<p><strong>ಬೀದರ್: ‘</strong>ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಹಿಳೆಗೆ ಸಿಗಬೇಕಿದ್ದ ಸಮಾನ ಸ್ಥಾನಮಾನ ದೊರೆತರೆ ನಾಡಿನ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗಲಿದೆ’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸ.ಚಿ.ರಮೇಶ ಅಭಿಪ್ರಾಯಪಟ್ಟರು.</p>.<p>ನಗರದ ಕರ್ನಾಟಕ ಸಾಹಿತ್ಯ ಸಂಘದ ಸಭಾಂಗಣದಲ್ಲಿ ಕರ್ನಾಟಕ ಸಾಹಿತ್ಯ ಸಂಘ ಹಾಗೂ ಗೌರಿ ಪ್ರಕಾಶನದ ಸಹಯೋಗದಲ್ಲಿ ಸುನೀತಾ ಕೂಡ್ಲಿಕರ್ ರಚಿತ ‘ತಾಯ್ತನದ ವಿಭಿನ್ನ ಗ್ರಹಿಕೆಗಳು’ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p>‘ಇಡೀ ನಾಡಿಗೆ ಹೋಲಿಸಿದರೆ ಬೀದರ್ ಜಿಲ್ಲೆಯಲ್ಲಿ ತಾಯಿ-ಮಗುವಿನ ವೃತ್ತ ನಿರ್ಮಿಸಿ ಮಹಿಳೆಗೆ ಆದರ ಪೂರ್ವಕವಾಗಿ ಕಂಡಿದೆ. 12ನೇ ಶತಮಾನದಲ್ಲಿ ಅಂದಿನ ಶರಣರು ಮಹಿಳೆಯನ್ನು ಎತ್ತರದಲ್ಲಿ ಕಂಡಿರುವ ಅನೇಕ ಉದಾಹರಣೆಗಳು ಇವೆ’ ಎಂದರು.</p>.<p>‘ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರದಂತೆ’ ಎಂಬ ಗಾದೆ ಅಕ್ಷರಶಃ ಸತ್ಯವಾಗಿಸಲು ಆಕೆಗೆ ಉತ್ತಮ ಶಿಕ್ಷಣ ನೀಡುವುದು ಅಗತ್ಯ. ಮಹಿಳೆ ಇಂದು ಹಲವು ವಿಧದಲ್ಲಿ ಕೌಟುಂಬಿಕ ಹಿಂಸೆ ಅನುಭವಿಸುತ್ತಾಳೆ. ಹೆಣ್ಣು, ಗಂಡೆಂಬ ಭೇದ ಮಾಡುವವರು ಮೊದಲು ಈ ಪುಸ್ತಕ ಖರೀದಿಸಿ ಅಧ್ಯಯನ ಮಾಡಿದರೆ ನಿಜಕ್ಕೂ ಮಹಿಳೆಯ ಸತ್ಯ ರೂಪ ಪರಿಚಯವಾಗಲಿದೆ’ ಎಂದರು.</p>.<p>ಮುಖ್ಯ ಅತಿಥಿಯಾಗಿದ್ದ ಬೀದರ್ ಅಭಿವೃದ್ಧಿ ವೇದಿಕೆ ಅಧ್ಯಕ್ಷ ಡಾ.ಚನ್ನಬಸಪ್ಪ ಹಾಲಳ್ಳಿ ಮಾತನಾಡಿ,‘ನಮ್ಮ ಸಂಸ್ಕೃತಿಯಲ್ಲಿ ಮಹಿಳೆಗೆ ಗೌರವದ ಸ್ಥಾನ ಇದೆ. ನಮ್ಮ ಸಂಸ್ಕೃತಿ ನೋಡಿ ವಿದೇಶಿಗರು ಸಹ ಇತ್ತಿಚೀಗೆ ಹೆಣ್ಣನ್ನು ಗೌರವಿಸುವ ಮನಸ್ಸು ಮಾಡಿದ್ದಾರೆ. ಇದು ಒಳ್ಳೆ ಬೆಳವಣಿಗೆ’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಜಗನ್ನಾಥ ಹೆಬ್ಬಾಳೆ ಮಾತನಾಡಿ,‘ಆಧುನಿಕ ಕಾಲದಲ್ಲಿ ತಾಯಿಯನ್ನು ಗೌರವಿಸುವುದರ ಬಗ್ಗೆ ಪ್ರತಿಯೊಬ್ಬರು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಮಹಿಳೆ ಮಕ್ಕಳಿಗೆ ಜನ್ಮ ನೀಡಿದರೆ ಸಾಲದು, ಒಳ್ಳೆ ಸಂಸ್ಕಾರವನ್ನೂ ಕೊಡಬೇಕು. ಆ ಮಗು ಮನೆಗೆ, ಕುಟುಂಬಕ್ಕೆ ಹಾಗೂ ಇಡೀ ಸಮಾಜದ ಆಸ್ತಿಯಾಗಿ ನಿಲ್ಲುವಂತೆ ಮಾಡಬೇಕು’ ಎಂದು ತಿಳಿಸಿದರು.</p>.<p>ಸಾಹಿತಿ ಡಾ.ಸೋಮನಾಥ ಯಾಳವಾರ ಮಾತನಾಡಿದರು. ಸುನೀತಾ ಕೂಡ್ಲಿಕರ್, ಶಾಂತಾಬಾಯಿ ಕಾಟೇಕರ್, ಡಾ.ರಾಜೇಂದ್ರ ಬಿರಾದಾರ, ಭಾರತಿ ವಸ್ತ್ರದ, ಡಾ.ಅಶೋಕ ಕೋರೆ, ಡಾ.ಸಂಜೀವಕುಮಾರ ಜುಮ್ಮಾ ಹಾಗೂ ಸಂಜೀವಕುಮಾರ ಅತಿವಾಳೆ ಅವರನ್ನು ಸನ್ಮಾನಿಸಲಾಯಿತು.</p>.<p>ಕರ್ನಾಟಕ ಸಾಹಿತ್ಯ ಸಂಘದ ಟ್ರಸ್ಟ್ ಅಧ್ಯಕ್ಷ ಶಂಕ್ರೆಪ್ಪ ಹೊನ್ನಾ, ಸರ್ಕಾರಿ ಡಿಪ್ಲೊಮಾ ಕಾಲೇಜಿನ ಸುನೀಲಕುಮಾರ ಕೂಡ್ಲಿಕರ್, ಅಕ್ಕಮಹಾದೇವಿ ಬ್ಯಾಂಕ್ನ ಅಧ್ಯಕ್ಷೆ ನೀಲಗಂಗಾ ಹೆಬ್ಬಾಳೆ, ಕರ್ನಾಟಕ ಜಾನಪದ ಪರಿಷತ್ನ ಪ್ರಕಾಶ ಕನ್ನಾಳೆ ಹಾಗೂ ಶಿವಶರಣಪ್ಪ ಗಣೇಶಪುರ ಇದ್ದರು.</p>.<p>ರಾಜಕುಮಾರ ಹೆಬ್ಬಾಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿಜಲಿಂಗಪ್ಪ ತಗಾರೆ ಸ್ವಾಗತಿಸಿದರು. ಮಹಾನಂದಾ ಮಡಕಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: ‘</strong>ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಹಿಳೆಗೆ ಸಿಗಬೇಕಿದ್ದ ಸಮಾನ ಸ್ಥಾನಮಾನ ದೊರೆತರೆ ನಾಡಿನ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗಲಿದೆ’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸ.ಚಿ.ರಮೇಶ ಅಭಿಪ್ರಾಯಪಟ್ಟರು.</p>.<p>ನಗರದ ಕರ್ನಾಟಕ ಸಾಹಿತ್ಯ ಸಂಘದ ಸಭಾಂಗಣದಲ್ಲಿ ಕರ್ನಾಟಕ ಸಾಹಿತ್ಯ ಸಂಘ ಹಾಗೂ ಗೌರಿ ಪ್ರಕಾಶನದ ಸಹಯೋಗದಲ್ಲಿ ಸುನೀತಾ ಕೂಡ್ಲಿಕರ್ ರಚಿತ ‘ತಾಯ್ತನದ ವಿಭಿನ್ನ ಗ್ರಹಿಕೆಗಳು’ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p>‘ಇಡೀ ನಾಡಿಗೆ ಹೋಲಿಸಿದರೆ ಬೀದರ್ ಜಿಲ್ಲೆಯಲ್ಲಿ ತಾಯಿ-ಮಗುವಿನ ವೃತ್ತ ನಿರ್ಮಿಸಿ ಮಹಿಳೆಗೆ ಆದರ ಪೂರ್ವಕವಾಗಿ ಕಂಡಿದೆ. 12ನೇ ಶತಮಾನದಲ್ಲಿ ಅಂದಿನ ಶರಣರು ಮಹಿಳೆಯನ್ನು ಎತ್ತರದಲ್ಲಿ ಕಂಡಿರುವ ಅನೇಕ ಉದಾಹರಣೆಗಳು ಇವೆ’ ಎಂದರು.</p>.<p>‘ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರದಂತೆ’ ಎಂಬ ಗಾದೆ ಅಕ್ಷರಶಃ ಸತ್ಯವಾಗಿಸಲು ಆಕೆಗೆ ಉತ್ತಮ ಶಿಕ್ಷಣ ನೀಡುವುದು ಅಗತ್ಯ. ಮಹಿಳೆ ಇಂದು ಹಲವು ವಿಧದಲ್ಲಿ ಕೌಟುಂಬಿಕ ಹಿಂಸೆ ಅನುಭವಿಸುತ್ತಾಳೆ. ಹೆಣ್ಣು, ಗಂಡೆಂಬ ಭೇದ ಮಾಡುವವರು ಮೊದಲು ಈ ಪುಸ್ತಕ ಖರೀದಿಸಿ ಅಧ್ಯಯನ ಮಾಡಿದರೆ ನಿಜಕ್ಕೂ ಮಹಿಳೆಯ ಸತ್ಯ ರೂಪ ಪರಿಚಯವಾಗಲಿದೆ’ ಎಂದರು.</p>.<p>ಮುಖ್ಯ ಅತಿಥಿಯಾಗಿದ್ದ ಬೀದರ್ ಅಭಿವೃದ್ಧಿ ವೇದಿಕೆ ಅಧ್ಯಕ್ಷ ಡಾ.ಚನ್ನಬಸಪ್ಪ ಹಾಲಳ್ಳಿ ಮಾತನಾಡಿ,‘ನಮ್ಮ ಸಂಸ್ಕೃತಿಯಲ್ಲಿ ಮಹಿಳೆಗೆ ಗೌರವದ ಸ್ಥಾನ ಇದೆ. ನಮ್ಮ ಸಂಸ್ಕೃತಿ ನೋಡಿ ವಿದೇಶಿಗರು ಸಹ ಇತ್ತಿಚೀಗೆ ಹೆಣ್ಣನ್ನು ಗೌರವಿಸುವ ಮನಸ್ಸು ಮಾಡಿದ್ದಾರೆ. ಇದು ಒಳ್ಳೆ ಬೆಳವಣಿಗೆ’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಜಗನ್ನಾಥ ಹೆಬ್ಬಾಳೆ ಮಾತನಾಡಿ,‘ಆಧುನಿಕ ಕಾಲದಲ್ಲಿ ತಾಯಿಯನ್ನು ಗೌರವಿಸುವುದರ ಬಗ್ಗೆ ಪ್ರತಿಯೊಬ್ಬರು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಮಹಿಳೆ ಮಕ್ಕಳಿಗೆ ಜನ್ಮ ನೀಡಿದರೆ ಸಾಲದು, ಒಳ್ಳೆ ಸಂಸ್ಕಾರವನ್ನೂ ಕೊಡಬೇಕು. ಆ ಮಗು ಮನೆಗೆ, ಕುಟುಂಬಕ್ಕೆ ಹಾಗೂ ಇಡೀ ಸಮಾಜದ ಆಸ್ತಿಯಾಗಿ ನಿಲ್ಲುವಂತೆ ಮಾಡಬೇಕು’ ಎಂದು ತಿಳಿಸಿದರು.</p>.<p>ಸಾಹಿತಿ ಡಾ.ಸೋಮನಾಥ ಯಾಳವಾರ ಮಾತನಾಡಿದರು. ಸುನೀತಾ ಕೂಡ್ಲಿಕರ್, ಶಾಂತಾಬಾಯಿ ಕಾಟೇಕರ್, ಡಾ.ರಾಜೇಂದ್ರ ಬಿರಾದಾರ, ಭಾರತಿ ವಸ್ತ್ರದ, ಡಾ.ಅಶೋಕ ಕೋರೆ, ಡಾ.ಸಂಜೀವಕುಮಾರ ಜುಮ್ಮಾ ಹಾಗೂ ಸಂಜೀವಕುಮಾರ ಅತಿವಾಳೆ ಅವರನ್ನು ಸನ್ಮಾನಿಸಲಾಯಿತು.</p>.<p>ಕರ್ನಾಟಕ ಸಾಹಿತ್ಯ ಸಂಘದ ಟ್ರಸ್ಟ್ ಅಧ್ಯಕ್ಷ ಶಂಕ್ರೆಪ್ಪ ಹೊನ್ನಾ, ಸರ್ಕಾರಿ ಡಿಪ್ಲೊಮಾ ಕಾಲೇಜಿನ ಸುನೀಲಕುಮಾರ ಕೂಡ್ಲಿಕರ್, ಅಕ್ಕಮಹಾದೇವಿ ಬ್ಯಾಂಕ್ನ ಅಧ್ಯಕ್ಷೆ ನೀಲಗಂಗಾ ಹೆಬ್ಬಾಳೆ, ಕರ್ನಾಟಕ ಜಾನಪದ ಪರಿಷತ್ನ ಪ್ರಕಾಶ ಕನ್ನಾಳೆ ಹಾಗೂ ಶಿವಶರಣಪ್ಪ ಗಣೇಶಪುರ ಇದ್ದರು.</p>.<p>ರಾಜಕುಮಾರ ಹೆಬ್ಬಾಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿಜಲಿಂಗಪ್ಪ ತಗಾರೆ ಸ್ವಾಗತಿಸಿದರು. ಮಹಾನಂದಾ ಮಡಕಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>