<p><strong>ಬೀದರ್:</strong> ‘ಸೆ. 14ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಒಟ್ಟು 17,476 ಪ್ರಕರಣಗಳನ್ನು ಇತ್ಯರ್ಥಗೊಳಿಸಿದ್ದು, ₹7.98 ಕೋಟಿ ಪರಿಹಾರ ಕಕ್ಷಿದಾರರಿಗೆ ಒದಗಿಸಲಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಎ.ಬನಸೋಡೆ ತಿಳಿಸಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು ಪ್ರಕರಣಗಳಲ್ಲಿ 6,788 ಪೆಂಡಿಂಗ್ ಪ್ರಕರಣಗಳಿದ್ದವು. ಜಿಲ್ಲೆಯಾದ್ಯಂತ ಒಟ್ಟು 10,688 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು, ₹54.75 ಲಕ್ಷ ವಸೂಲಾತಿ ಮಾಡಿ ಪರಿಹಾರ ಒದಗಿಸಲಾಗಿದೆ ಎಂದು ವಿವರಿಸಿದರು.</p>.<p>ಬ್ಯಾಂಕ್ ವಸೂಲಾತಿ, ನಗರಸಭೆ, ಪುರಸಭೆ ಗ್ರಾಮ ಪಂಚಾಯಿತಿಗಳ ಆಸ್ತಿ ತೆರಿಗೆ, ಬಿ.ಎಸ್.ಎನ್.ಎಲ್, ಜೆಸ್ಕಾಂ ಬಾಕಿ ಬಿಲ್, ಟ್ರಾಫಿಕ್ ವಸೂಲಾತಿಗೆ ಸಂಬಂಧಿಸಿದ ಪ್ರಕರಣಗಳಾಗಿದ್ದವು. ಸಂಧಾನದ ಮೂಲಕ ಒಂದು ಜೋಡಿ ಪುನಃ ಒಂದಾಗಿದ್ದಾರೆ ಎಂದರು.</p>.<p>ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿ ಜಗದೀಶ್ವರ ದೊರೆ, ಆಕಾಶ ಸಜ್ಜನ್, ನಾಗರಾಜ, ಪ್ರೀತಿ, ಈರಮ್ಮ, ಜೀವನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ಸೆ. 14ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಒಟ್ಟು 17,476 ಪ್ರಕರಣಗಳನ್ನು ಇತ್ಯರ್ಥಗೊಳಿಸಿದ್ದು, ₹7.98 ಕೋಟಿ ಪರಿಹಾರ ಕಕ್ಷಿದಾರರಿಗೆ ಒದಗಿಸಲಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಎ.ಬನಸೋಡೆ ತಿಳಿಸಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು ಪ್ರಕರಣಗಳಲ್ಲಿ 6,788 ಪೆಂಡಿಂಗ್ ಪ್ರಕರಣಗಳಿದ್ದವು. ಜಿಲ್ಲೆಯಾದ್ಯಂತ ಒಟ್ಟು 10,688 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು, ₹54.75 ಲಕ್ಷ ವಸೂಲಾತಿ ಮಾಡಿ ಪರಿಹಾರ ಒದಗಿಸಲಾಗಿದೆ ಎಂದು ವಿವರಿಸಿದರು.</p>.<p>ಬ್ಯಾಂಕ್ ವಸೂಲಾತಿ, ನಗರಸಭೆ, ಪುರಸಭೆ ಗ್ರಾಮ ಪಂಚಾಯಿತಿಗಳ ಆಸ್ತಿ ತೆರಿಗೆ, ಬಿ.ಎಸ್.ಎನ್.ಎಲ್, ಜೆಸ್ಕಾಂ ಬಾಕಿ ಬಿಲ್, ಟ್ರಾಫಿಕ್ ವಸೂಲಾತಿಗೆ ಸಂಬಂಧಿಸಿದ ಪ್ರಕರಣಗಳಾಗಿದ್ದವು. ಸಂಧಾನದ ಮೂಲಕ ಒಂದು ಜೋಡಿ ಪುನಃ ಒಂದಾಗಿದ್ದಾರೆ ಎಂದರು.</p>.<p>ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿ ಜಗದೀಶ್ವರ ದೊರೆ, ಆಕಾಶ ಸಜ್ಜನ್, ನಾಗರಾಜ, ಪ್ರೀತಿ, ಈರಮ್ಮ, ಜೀವನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>