<p><strong>ಬೀದರ್:</strong> ‘ಜಿಲ್ಲೆಯಲ್ಲಿ ಮಾರ್ಚ್ 8ರಂದು ಏರ್ಪಡಿಸಿದ್ದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಒಟ್ಟು 52,812 ಪ್ರಕರಣಗಳನ್ನು ಇತ್ಯರ್ಥಗೊಳಿಸಿ, ಕಕ್ಷಿದಾರರಿಗೆ ₹28.03 ಕೋಟಿ ಪರಿಹಾರ ಒದಗಿಸಲಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಬನಸೋಡೆ ತಿಳಿಸಿದರು.</p>.<p>ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಾದ್ಯಂತ ಪೆಂಡಿಂಗ್ ಇದ್ದ 10,004 ಪ್ರಕರಣಗಳನ್ನು ಇತ್ಯರ್ಥಗೊಳಿಸಿ, ₹12.83 ಕೋಟಿ ವಸೂಲಿ ಮಾಡಿ ಪರಿಹಾರ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 42,768 ವ್ಯಾಜ್ಯಪೂರ್ವ ಪ್ರಕರಣಗಳನ್ನು ಸಹ ಪರಿಹರಿಸಲಾಗಿದೆ. ₹15.20 ಕೋಟಿ ಪರಿಹಾರ ಒದಗಿಸಲಾಗಿದೆ’ ಎಂದರು.</p>.<p>‘ರಾಜಿ ಸಂಧಾನದ ಮೂಲಕ ಏಳು ಜೋಡಿಗಳನ್ನು ಒಂದುಗೂಡಿಸಲಾಗಿದೆ. ನ್ಯಾಯಾಲಯಗಳಲ್ಲಿ ಬಾಕಿ ಇರುವ ಒಟ್ಟು 8 ಹಳೆಯ ಪ್ರಕರಣ ಕೂಡ ಇತ್ಯರ್ಥಪಡಿಸಲಾಗಿದೆ’ ಎಂದು ವಿವರಿಸಿದರು.</p>.<p>ಪ್ರಾಧಿಕಾರದ ಸಿಬ್ಬಂದಿ ಜಗದೀಶ್ವರ ದೊರೆ, ಆಕಾಶ ಸಜ್ಜನಶೆಟ್ಟಿ, ನಾಗರಾಜ, ಪ್ರೀತಿ, ಜೀವನ್, ಈರಮ್ಮ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ಜಿಲ್ಲೆಯಲ್ಲಿ ಮಾರ್ಚ್ 8ರಂದು ಏರ್ಪಡಿಸಿದ್ದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಒಟ್ಟು 52,812 ಪ್ರಕರಣಗಳನ್ನು ಇತ್ಯರ್ಥಗೊಳಿಸಿ, ಕಕ್ಷಿದಾರರಿಗೆ ₹28.03 ಕೋಟಿ ಪರಿಹಾರ ಒದಗಿಸಲಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಬನಸೋಡೆ ತಿಳಿಸಿದರು.</p>.<p>ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಾದ್ಯಂತ ಪೆಂಡಿಂಗ್ ಇದ್ದ 10,004 ಪ್ರಕರಣಗಳನ್ನು ಇತ್ಯರ್ಥಗೊಳಿಸಿ, ₹12.83 ಕೋಟಿ ವಸೂಲಿ ಮಾಡಿ ಪರಿಹಾರ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 42,768 ವ್ಯಾಜ್ಯಪೂರ್ವ ಪ್ರಕರಣಗಳನ್ನು ಸಹ ಪರಿಹರಿಸಲಾಗಿದೆ. ₹15.20 ಕೋಟಿ ಪರಿಹಾರ ಒದಗಿಸಲಾಗಿದೆ’ ಎಂದರು.</p>.<p>‘ರಾಜಿ ಸಂಧಾನದ ಮೂಲಕ ಏಳು ಜೋಡಿಗಳನ್ನು ಒಂದುಗೂಡಿಸಲಾಗಿದೆ. ನ್ಯಾಯಾಲಯಗಳಲ್ಲಿ ಬಾಕಿ ಇರುವ ಒಟ್ಟು 8 ಹಳೆಯ ಪ್ರಕರಣ ಕೂಡ ಇತ್ಯರ್ಥಪಡಿಸಲಾಗಿದೆ’ ಎಂದು ವಿವರಿಸಿದರು.</p>.<p>ಪ್ರಾಧಿಕಾರದ ಸಿಬ್ಬಂದಿ ಜಗದೀಶ್ವರ ದೊರೆ, ಆಕಾಶ ಸಜ್ಜನಶೆಟ್ಟಿ, ನಾಗರಾಜ, ಪ್ರೀತಿ, ಜೀವನ್, ಈರಮ್ಮ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>