ಬೀದರ್: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಗುರುವಾರ ಶ್ರೀನಿವಾಸ ರಾಮಾನುಜನ್ ಅಯ್ಯಾಂಗರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಗಣಿತ ದಿನ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ನಿವೃತ್ತ ಪ್ರಾಚಾರ್ಯ ಪ್ರೊ.ರಾಜಪ್ಪ ಬಬಚೇಡಿ ಅವರು ಶ್ರೀನಿವಾಸ ರಾಮಾನುಜನ್ ಅಯ್ಯಾಂಗರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ಗಣಿತ ವಿಭಾಗದ ಮುಖ್ಯಸ್ಥ ಪ್ರೊ.ಎಲಿಶಾ ಮಾತನಾಡಿದರು. ವಿದ್ಯಾರ್ಥಿನಿಯರಾದ ರೇಣುಕಾ, ಫರಡೋಸ್ ಬೇಗಮ್ಬಿ, ಸುಧಾರಾಣಿ, ಅನುಷ್ಕಾ ಪಾಟೀಲ ಅವರು ಶ್ರೀನಿವಾಸ ರಾಮಾನುಜನ್ ಕುರಿತು ಮಾತನಾಡಿದರು.
ಪ್ರಾಚಾರ್ಯ ಪ್ರೊ.ಮನೋಜಕುಮಾರ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕರಾದ ಉಮಾಕಾಂತ ಗಣಪತಿ, ಸಂಜೀವಕುಮಾರ ಅಪ್ಪೆ, ಭಾಗ್ಯವತಿ, ಪಾರ್ವತಿ ಮೇತ್ರೆ ಇದ್ದರು.
ಐಕ್ಯೂಎಸಿ ಘಟಕದ ಸಂಯೋಜಕ ಭೀಮಶಾ ಕೆ.ಬಿ ರವರು ಸ್ವಾಗತಿಸಿದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಸಚ್ಚಿದಾನಂದ ರುಮ್ಮಾ ವಂದಿಸಿದರು.