<p><strong>ಬೀದರ್</strong>: ‘ಪ್ರಜಾಪ್ರಭುತ್ವ ಉಳಿಸಿಕೊಂಡು ಹೋಗಬೇಕಾದರೆ ಅರ್ಹ ಮತದಾರರೆಲ್ಲರೂ ಮತದಾನ ಮಾಡಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ತಿಳಿಸಿದರು.</p>.<p>ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ನಗರದ ಡಾ. ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ಗುರುವಾರ ಏರ್ಪಡಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ವಿಶ್ವದ ಕೆಲವು ದೇಶಗಳಲ್ಲಿ ಇನ್ನೂ ಪ್ರಜಾಪ್ರಭುತ್ವ ವ್ಯವಸ್ಥೆ ಇಲ್ಲ. 2011ರಲ್ಲಿ ದಕ್ಷಿಣ ಸುಡಾನ್ ಹೊಸ ದೇಶವಾಗಿ ಉದಯವಾದಾಗ ಅಲ್ಲಿನ ಶಾಂತಿ ಪಾಲನಾ ಪಡೆಯಲ್ಲಿ ನಾನು ಕೆಲಸ ಮಾಡಿದ್ದೆ. ಆ ದೇಶದಲ್ಲಿ ಸರ್ಕಾರಿ ಶಾಲೆಗಳಿಲ್ಲ. ಇತ್ತೀಚೆಗೆ ಒಂದೆರೆಡು ಕಡೆ ಆರಂಭಗೊಂಡಿವೆ. ಅಲ್ಲಿನ ಮಕ್ಕಳು ಬೀದಿ ಬದಿ ದೀಪದಲ್ಲಿ ಕುಳಿತು ಓದುವ ಪರಿಸ್ಥಿತಿ ಇದೆ. ಭಾರತ ದೇಶವಾಸಿಗಳು ನಾವು ಬಹಳ ಸುದೈವಿಗಳು ಎಂದರು.</p>.<p>ಎಲ್ಲರೂ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಶೇಕಡಾ ನೂರಕ್ಕೆ ನೂರರಷ್ಟು ಹಕ್ಕು ಚಲಾಯಿಸಬೇಕು. ಪ್ರತಿ ಚುನಾವಣೆಯಲ್ಲಿ ಶೇ 60ರಿಂದ 70ರಷ್ಟು ಮತದಾನವಾಗುತ್ತಿದೆ. 18 ವರ್ಷ ಮೇಲಿನ ಎಲ್ಲ ಅರ್ಹರೂ ಮತದಾನ ಮಾಡಬೇಕು ಎಂದು ಹೇಳಿದರು.<br><br>ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಮಾತನಾಡಿ, 1950ರಲ್ಲಿ ಭಾರತದ ಚುನಾವಣಾ ಆಯೋಗ ಅಸ್ತಿತ್ವಕ್ಕೆ ಬಂತು. ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತದೆ. ಜಗತ್ತಿನ 193 ದೇಶಗಳಲ್ಲಿ ಭಾರತ ದೊಡ್ಡ ಪ್ರಜಾಪ್ರಭುತ್ವ ಹೊಂದಿದ ರಾಷ್ಟ್ರವಾಗಿದೆ. ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿದೆ ಎಂದರು.</p>.<p>ಮತದಾರರ ಪಟ್ಟಿಯಲ್ಲಿ ಯುವ ಮತದಾರರು ತಮ್ಮ ಹೆಸರನ್ನು ಸೇರಿಸಬೇಕು. ಈ ಮಾಹಿತಿಯನ್ನು ತಮ್ಮ ಮಿತ್ರರಿಗೂ ತಿಳಿಸಬೇಕು. ಮತ ಹಾಕಿದರೆ ಮಾತ್ರ ನಮಗೆ ಕೇಳುವ ಹಕ್ಕು ಇರುತ್ತದೆ ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಡಾ. ಗಿರೀಶ ಬದೋಲೆ ಮಾತನಾಡಿ, ಬರುವ ಕೆಲವು ದಿನಗಳಲ್ಲಿ ಲೋಕಸಭಾ ಚುನಾವಣಾ ಬರುತ್ತಿದೆ. ಎಲ್ಲರೂ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ, ನೆರೆಹೊರೆಯವರಿಗೂ ತಿಳಿಸಬೇಕು. ಅಬ್ರಾಹಂ ಲಿಂಕನ್ ಹೇಳಿದಂತೆ ‘ಬುಲೆಟ್ಗಿಂತ ಬ್ಯಾಲೆಟ್ ಬಲಿಷ್ಠವಾಗಿದ್ದು’ ಎಲ್ಲರೂ ಮತದಾನ ಮಾಡಬೇಕು ಎಂದು ಹೇಳಿದರು.</p>.<p>ಅತ್ಯುತ್ತಮ ಬಿಎಲ್ಒಗಳು, ಉತ್ತಮ ಮತದಾರರ ಸಂಘ ಸ್ಥಾಪಿಸಿದವರಿಗೆ, ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಏರ್ಪಡಿಸಿದ್ದ ವಿವಿಧ ಕಾರ್ಯಕ್ರಮಗಳಲ್ಲಿ ವಿಜೇತರಾದ ಮಕ್ಕಳಿಗೆ ಸನ್ಮಾನಿಸಲಾಯಿತು.</p>.<p>ಯುವ ಮತದಾರರಿಗೆ ಎಪಿಕ್ ಕಾರ್ಡ್ಗಳನ್ನು ವಿತರಿಸಲಾಯಿತು. ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿಯಿಂದ ರಂಗಮಂದಿರದವರೆಗೆ ಜಾಥಾ ನಡೆಯಿತು. ವಿವಿಧ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ತಹಶೀಲ್ದಾರ್ ದಿಲ್ಶದ್ ಮೆಹತ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಕಾಂತ ಶಾಬಾದಕರ್, ಚುನಾವಣಾ ತಹಶೀಲ್ದಾರ್ ಗೋಪಾಲ ಕಪೂರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ಪ್ರಜಾಪ್ರಭುತ್ವ ಉಳಿಸಿಕೊಂಡು ಹೋಗಬೇಕಾದರೆ ಅರ್ಹ ಮತದಾರರೆಲ್ಲರೂ ಮತದಾನ ಮಾಡಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ತಿಳಿಸಿದರು.</p>.<p>ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ನಗರದ ಡಾ. ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ಗುರುವಾರ ಏರ್ಪಡಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ವಿಶ್ವದ ಕೆಲವು ದೇಶಗಳಲ್ಲಿ ಇನ್ನೂ ಪ್ರಜಾಪ್ರಭುತ್ವ ವ್ಯವಸ್ಥೆ ಇಲ್ಲ. 2011ರಲ್ಲಿ ದಕ್ಷಿಣ ಸುಡಾನ್ ಹೊಸ ದೇಶವಾಗಿ ಉದಯವಾದಾಗ ಅಲ್ಲಿನ ಶಾಂತಿ ಪಾಲನಾ ಪಡೆಯಲ್ಲಿ ನಾನು ಕೆಲಸ ಮಾಡಿದ್ದೆ. ಆ ದೇಶದಲ್ಲಿ ಸರ್ಕಾರಿ ಶಾಲೆಗಳಿಲ್ಲ. ಇತ್ತೀಚೆಗೆ ಒಂದೆರೆಡು ಕಡೆ ಆರಂಭಗೊಂಡಿವೆ. ಅಲ್ಲಿನ ಮಕ್ಕಳು ಬೀದಿ ಬದಿ ದೀಪದಲ್ಲಿ ಕುಳಿತು ಓದುವ ಪರಿಸ್ಥಿತಿ ಇದೆ. ಭಾರತ ದೇಶವಾಸಿಗಳು ನಾವು ಬಹಳ ಸುದೈವಿಗಳು ಎಂದರು.</p>.<p>ಎಲ್ಲರೂ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಶೇಕಡಾ ನೂರಕ್ಕೆ ನೂರರಷ್ಟು ಹಕ್ಕು ಚಲಾಯಿಸಬೇಕು. ಪ್ರತಿ ಚುನಾವಣೆಯಲ್ಲಿ ಶೇ 60ರಿಂದ 70ರಷ್ಟು ಮತದಾನವಾಗುತ್ತಿದೆ. 18 ವರ್ಷ ಮೇಲಿನ ಎಲ್ಲ ಅರ್ಹರೂ ಮತದಾನ ಮಾಡಬೇಕು ಎಂದು ಹೇಳಿದರು.<br><br>ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಮಾತನಾಡಿ, 1950ರಲ್ಲಿ ಭಾರತದ ಚುನಾವಣಾ ಆಯೋಗ ಅಸ್ತಿತ್ವಕ್ಕೆ ಬಂತು. ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತದೆ. ಜಗತ್ತಿನ 193 ದೇಶಗಳಲ್ಲಿ ಭಾರತ ದೊಡ್ಡ ಪ್ರಜಾಪ್ರಭುತ್ವ ಹೊಂದಿದ ರಾಷ್ಟ್ರವಾಗಿದೆ. ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿದೆ ಎಂದರು.</p>.<p>ಮತದಾರರ ಪಟ್ಟಿಯಲ್ಲಿ ಯುವ ಮತದಾರರು ತಮ್ಮ ಹೆಸರನ್ನು ಸೇರಿಸಬೇಕು. ಈ ಮಾಹಿತಿಯನ್ನು ತಮ್ಮ ಮಿತ್ರರಿಗೂ ತಿಳಿಸಬೇಕು. ಮತ ಹಾಕಿದರೆ ಮಾತ್ರ ನಮಗೆ ಕೇಳುವ ಹಕ್ಕು ಇರುತ್ತದೆ ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಡಾ. ಗಿರೀಶ ಬದೋಲೆ ಮಾತನಾಡಿ, ಬರುವ ಕೆಲವು ದಿನಗಳಲ್ಲಿ ಲೋಕಸಭಾ ಚುನಾವಣಾ ಬರುತ್ತಿದೆ. ಎಲ್ಲರೂ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ, ನೆರೆಹೊರೆಯವರಿಗೂ ತಿಳಿಸಬೇಕು. ಅಬ್ರಾಹಂ ಲಿಂಕನ್ ಹೇಳಿದಂತೆ ‘ಬುಲೆಟ್ಗಿಂತ ಬ್ಯಾಲೆಟ್ ಬಲಿಷ್ಠವಾಗಿದ್ದು’ ಎಲ್ಲರೂ ಮತದಾನ ಮಾಡಬೇಕು ಎಂದು ಹೇಳಿದರು.</p>.<p>ಅತ್ಯುತ್ತಮ ಬಿಎಲ್ಒಗಳು, ಉತ್ತಮ ಮತದಾರರ ಸಂಘ ಸ್ಥಾಪಿಸಿದವರಿಗೆ, ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಏರ್ಪಡಿಸಿದ್ದ ವಿವಿಧ ಕಾರ್ಯಕ್ರಮಗಳಲ್ಲಿ ವಿಜೇತರಾದ ಮಕ್ಕಳಿಗೆ ಸನ್ಮಾನಿಸಲಾಯಿತು.</p>.<p>ಯುವ ಮತದಾರರಿಗೆ ಎಪಿಕ್ ಕಾರ್ಡ್ಗಳನ್ನು ವಿತರಿಸಲಾಯಿತು. ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿಯಿಂದ ರಂಗಮಂದಿರದವರೆಗೆ ಜಾಥಾ ನಡೆಯಿತು. ವಿವಿಧ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ತಹಶೀಲ್ದಾರ್ ದಿಲ್ಶದ್ ಮೆಹತ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಕಾಂತ ಶಾಬಾದಕರ್, ಚುನಾವಣಾ ತಹಶೀಲ್ದಾರ್ ಗೋಪಾಲ ಕಪೂರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>