<p><strong>ಬೀದರ್:</strong> ಅಖಿಲ ಭಾರತ ಅಂಚೆ ನೌಕರರ ಸಂಘಟನೆ ವತಿಯಿಂದ ಸೆ. 10 ಮತ್ತು 11 ರಂದು ಬೀದರ್ನಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಮಹಿಳಾ ಅಂಚೆ ನೌಕರರ ಸಮಾವೇಶಕ್ಕೆ ಸಿದ್ಧತೆ ಆರಂಭಿಸಲಾಗಿದೆ ಎಂದು ಸಂಘಟನೆಯ ಬೀದರ್ ವಿಭಾಗದ ಅಧ್ಯಕ್ಷೆ ಮಂಗಲಾ ಭಾಗವತ್ ತಿಳಿಸಿದರು.</p>.<p>ಇಲ್ಲಿಯ ಹೊಟೇಲ್ ಕನಕಾದ್ರಿಯಲ್ಲಿ ನಡೆದ ಸಮಾವೇಶದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.<br />ದೇಶದ ವಿವಿಧೆಡೆಯ ಮಹಿಳಾ ಅಂಚೆ ನೌಕರರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಅತಿಥಿ ಸತ್ಕಾರ ಸೇರಿದಂತೆ ಸರ್ವ ರೀತಿಯಿಂದಲೂ ಸಮಾವೇಶವನ್ನು ಯಶಸ್ವಿಗೊಳಿಸಲು ಸಂಘಟನೆ ಪದಾಧಿಕಾರಿಗಳು ಈಗಾಗಲೇ ವಿವಿಧ ಸಿದ್ಧತಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಹೇಳಿದರು.</p>.<p>ಕೆಲಸದ ಸ್ಥಳಗಳಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವುದು, ಮಹಿಳೆಯರನ್ನು ಇಲಾಖೆಯ ಮುಖ್ಯ ವಾಹಿನಿಗೆ ತರುವುದು ಹಾಗೂ ಅವರಿಗೆ ಸಮಾನ ಅವಕಾಶಗಳನ್ನು ಕಲ್ಪಿಸಿಕೊಡುವುದು ಸಮಾವೇಶದ ಉದ್ದೇಶವಾಗಿದೆ ಎಂದು ತಿಳಿಸಿದರು.</p>.<p>ಸಂಘಟನೆಯ ನವದೆಹಲಿಯ ಶ್ರೀನಿವಾಸ್ ಮಾತನಾಡಿ, ಕರ್ನಾಟಕದಲ್ಲೇ ಬೀದರ್ನಲ್ಲಿ ಮೊದಲ ಬಾರಿಗೆ ರಾಷ್ಟ್ರಮಟ್ಟದ ಮಹಿಳಾ ಅಂಚೆ ನೌಕರರ ಸಮಾವೇಶ ನಡೆಯಲಿದೆ. ಸಮಾವೇಶದ ಯಶಸ್ವಿಗೆ ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.</p>.<p>ಬೀದರ್ಲ್ಲಿ ಸಮಾವೇಶ ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ. ಸಮಾವೇಶದ ಯಶಸ್ವಿಗೆ ಎಲ್ಲ ಸಹಕಾರ ನೀಡಲಾಗುವುದು ಎಂದು ಸಮಾವೇಶದ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ತಿಳಿಸಿದರು.</p>.<p>ಸಂಘಟನೆಯ ಕರ್ನಾಟಕ ವಲಯದ ಕಾರ್ಯದರ್ಶಿ ಜಾನಕಿರಾಂ, ಬೆಂಗಳೂರಿನ ಕೃಷ್ಣಮೂರ್ತಿ ಮಾತನಾಡಿದರು. ಗುಂಡಪ್ಪ ಕನಕ, ಚಿದಾನಂದ ಕಟ್ಟಿ, ಸುಧಾಕರ, ಭರತ, ಗುರುರಾಜ, ಅಭಿನವ, ವೀಣಾ ಕೆ.ವಿ ಇದ್ದರು.<br />ಸುಭಾಷ್ ದೊಡ್ಡಿ ಸ್ವಾಗತಿಸಿದರು. ಬೀದರ್ ವಿಭಾಗದ ಕಾರ್ಯದರ್ಶಿ ಕಲ್ಲಪ್ಪ ಕೋನಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಅಖಿಲ ಭಾರತ ಅಂಚೆ ನೌಕರರ ಸಂಘಟನೆ ವತಿಯಿಂದ ಸೆ. 10 ಮತ್ತು 11 ರಂದು ಬೀದರ್ನಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಮಹಿಳಾ ಅಂಚೆ ನೌಕರರ ಸಮಾವೇಶಕ್ಕೆ ಸಿದ್ಧತೆ ಆರಂಭಿಸಲಾಗಿದೆ ಎಂದು ಸಂಘಟನೆಯ ಬೀದರ್ ವಿಭಾಗದ ಅಧ್ಯಕ್ಷೆ ಮಂಗಲಾ ಭಾಗವತ್ ತಿಳಿಸಿದರು.</p>.<p>ಇಲ್ಲಿಯ ಹೊಟೇಲ್ ಕನಕಾದ್ರಿಯಲ್ಲಿ ನಡೆದ ಸಮಾವೇಶದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.<br />ದೇಶದ ವಿವಿಧೆಡೆಯ ಮಹಿಳಾ ಅಂಚೆ ನೌಕರರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಅತಿಥಿ ಸತ್ಕಾರ ಸೇರಿದಂತೆ ಸರ್ವ ರೀತಿಯಿಂದಲೂ ಸಮಾವೇಶವನ್ನು ಯಶಸ್ವಿಗೊಳಿಸಲು ಸಂಘಟನೆ ಪದಾಧಿಕಾರಿಗಳು ಈಗಾಗಲೇ ವಿವಿಧ ಸಿದ್ಧತಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಹೇಳಿದರು.</p>.<p>ಕೆಲಸದ ಸ್ಥಳಗಳಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವುದು, ಮಹಿಳೆಯರನ್ನು ಇಲಾಖೆಯ ಮುಖ್ಯ ವಾಹಿನಿಗೆ ತರುವುದು ಹಾಗೂ ಅವರಿಗೆ ಸಮಾನ ಅವಕಾಶಗಳನ್ನು ಕಲ್ಪಿಸಿಕೊಡುವುದು ಸಮಾವೇಶದ ಉದ್ದೇಶವಾಗಿದೆ ಎಂದು ತಿಳಿಸಿದರು.</p>.<p>ಸಂಘಟನೆಯ ನವದೆಹಲಿಯ ಶ್ರೀನಿವಾಸ್ ಮಾತನಾಡಿ, ಕರ್ನಾಟಕದಲ್ಲೇ ಬೀದರ್ನಲ್ಲಿ ಮೊದಲ ಬಾರಿಗೆ ರಾಷ್ಟ್ರಮಟ್ಟದ ಮಹಿಳಾ ಅಂಚೆ ನೌಕರರ ಸಮಾವೇಶ ನಡೆಯಲಿದೆ. ಸಮಾವೇಶದ ಯಶಸ್ವಿಗೆ ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.</p>.<p>ಬೀದರ್ಲ್ಲಿ ಸಮಾವೇಶ ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ. ಸಮಾವೇಶದ ಯಶಸ್ವಿಗೆ ಎಲ್ಲ ಸಹಕಾರ ನೀಡಲಾಗುವುದು ಎಂದು ಸಮಾವೇಶದ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ತಿಳಿಸಿದರು.</p>.<p>ಸಂಘಟನೆಯ ಕರ್ನಾಟಕ ವಲಯದ ಕಾರ್ಯದರ್ಶಿ ಜಾನಕಿರಾಂ, ಬೆಂಗಳೂರಿನ ಕೃಷ್ಣಮೂರ್ತಿ ಮಾತನಾಡಿದರು. ಗುಂಡಪ್ಪ ಕನಕ, ಚಿದಾನಂದ ಕಟ್ಟಿ, ಸುಧಾಕರ, ಭರತ, ಗುರುರಾಜ, ಅಭಿನವ, ವೀಣಾ ಕೆ.ವಿ ಇದ್ದರು.<br />ಸುಭಾಷ್ ದೊಡ್ಡಿ ಸ್ವಾಗತಿಸಿದರು. ಬೀದರ್ ವಿಭಾಗದ ಕಾರ್ಯದರ್ಶಿ ಕಲ್ಲಪ್ಪ ಕೋನಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>