<p><strong>ಬೀದರ್</strong>: ಮಳೆಯ ನಡುವೆಯೇ ನವರಾತ್ರಿ ಉತ್ಸವದ ಧಾರ್ಮಿಕ ವಿಧಿ ವಿಧಾನಗಳು ಸೋಮವಾರ ಜಿಲ್ಲೆಯಾದ್ಯಂತ ಆರಂಭಗೊಂಡವು.</p>.<p>ಮನೆ ಹಾಗೂ ವಿವಿಧ ಮಂದಿರಗಳಲ್ಲಿ ಘಟ ಸ್ಥಾಪನೆ ಮಾಡಿ, ಶ್ರದ್ಧಾ, ಭಕ್ತಿಯಿಂದ ದೇವಿಗೆ ಪೂಜೆ ನೆರವೇರಿಸಲಾಯಿತು. ಇದರೊಂದಿಗೆ ವಿವಿಧ ಧಾರ್ಮಿಕ ವ್ರತಾಚರಣೆಗಳು ಪ್ರಾರಂಭವಾದವು. ಸೋಮವಾರದಿಂದ ಒಂಬತ್ತು ದಿನಗಳವರೆಗೆ ನಿತ್ಯ ದೇವಿಗೆ ವಿಶೇಷ ಅಲಂಕಾರ, ಪೂಜೆ, ನೈವೇದ್ಯ ಸಮರ್ಪಣೆ, ಸಂಗೀತ ಕಾರ್ಯಕ್ರಮಗಳು ಜರುಗಲಿವೆ.</p>.<p>ನಗರದ ಕುಂಬಾರವಾಡ, ಚಿದ್ರಿ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ಪೂಜಾ ಕೈಂಕರ್ಯಗಳು ಜರುಗಿದವು. ಜನರು ಶ್ರದ್ಧಾ, ಭಕ್ತಿಯಿಂದ ಪಾಲ್ಗೊಂಡು, ದೇವರ ದರ್ಶನ ಪಡೆದರು. ಭಾನುವಾರವೇ ದೇವಸ್ಥಾನಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಿ, ತಳಿರು ತೋರಣಗಳಿಂದ ಅಲಂಕರಿಸಲಾಗಿದೆ.</p>.<p><strong>ಖರೀದಿ ಭರಾಟೆ: </strong></p>.<p>ನವರಾತ್ರಿಯ ಮೊದಲ ದಿನ ಹಬ್ಬದ ಖರೀದಿ ಭರಾಟೆ ಜೋರಾಗಿತ್ತು. ಸೋಮವಾರ ಬೆಳಕು ಹರಿಯುತ್ತಿದ್ದಂತೆ ಮಾರುಕಟ್ಟೆಗಳಲ್ಲಿ ಹೆಚ್ಚಿನ ಜನಸಂದಣಿ ಕಂಡು ಬಂತು.</p>.<p>ನಗರದ ಮೋಹನ್ ಮಾರ್ಕೆಟ್, ಶಿವನಗರದ ವಾಕಿಂಗ್ ಪಾತ್, ನೌಬಾದ್, ಭಗತ್ ಸಿಂಗ್ ವೃತ್ತ, ಬಸವೇಶ್ವರ ವೃತ್ತ, ಬೊಮ್ಮಗೊಂಡೇಶ್ವರ ವೃತ್ತ, ಹಾರೂರಗೇರಿ ಕಮಾನ್, ವಿದ್ಯಾನಗರ, ಮೈಲೂರ ಕ್ರಾಸ್, ಕುಂಬಾರವಾಡ, ಗುಂಪಾ ರಿಂಗ್ ರೋಡ್ ಎಲ್ಲೆಡೆ ಜನಜಾತ್ರೆ ಇತ್ತು. </p>.<p>ಕಬ್ಬು, ಬಾಳೆದಿಂಡು, ಹೂ, ಬೂದುಗುಂಬಳ, ಅಲಂಕಾರಿಕ ವಸ್ತುಗಳು, ಪೂಜಾ ಸಾಮಗ್ರಿಗಳು, ಹಣ್ಣು, ತರಕಾರಿಯನ್ನು ಜನ ಖರೀದಿಸಿದರು. ಬೆಳಿಗ್ಗೆ ಕೆಲಕಾಲ ಜಿಟಿಜಿಟಿ ಮಳೆಯಾಯಿತು. ಮಳೆಯಲ್ಲೇ ಅಗತ್ಯ ವಸ್ತುಗಳನ್ನು ಖರೀದಿಸಿದರು. ಕೆಲಸಮಯ ಬಿಡುವು ಕೊಟ್ಟ ಮಳೆ ಮಧ್ಯಾಹ್ನದಿಂದ ಬಿರುಸಾಗಿ ಸುರಿಯಿತು. ಆದರೆ, ಅಷ್ಟೊತ್ತಿಗೆ ವ್ಯಾಪಾರ ವಹಿವಾಟು ಬಹುತೇಕ ಪೂರ್ತಿಗೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಮಳೆಯ ನಡುವೆಯೇ ನವರಾತ್ರಿ ಉತ್ಸವದ ಧಾರ್ಮಿಕ ವಿಧಿ ವಿಧಾನಗಳು ಸೋಮವಾರ ಜಿಲ್ಲೆಯಾದ್ಯಂತ ಆರಂಭಗೊಂಡವು.</p>.<p>ಮನೆ ಹಾಗೂ ವಿವಿಧ ಮಂದಿರಗಳಲ್ಲಿ ಘಟ ಸ್ಥಾಪನೆ ಮಾಡಿ, ಶ್ರದ್ಧಾ, ಭಕ್ತಿಯಿಂದ ದೇವಿಗೆ ಪೂಜೆ ನೆರವೇರಿಸಲಾಯಿತು. ಇದರೊಂದಿಗೆ ವಿವಿಧ ಧಾರ್ಮಿಕ ವ್ರತಾಚರಣೆಗಳು ಪ್ರಾರಂಭವಾದವು. ಸೋಮವಾರದಿಂದ ಒಂಬತ್ತು ದಿನಗಳವರೆಗೆ ನಿತ್ಯ ದೇವಿಗೆ ವಿಶೇಷ ಅಲಂಕಾರ, ಪೂಜೆ, ನೈವೇದ್ಯ ಸಮರ್ಪಣೆ, ಸಂಗೀತ ಕಾರ್ಯಕ್ರಮಗಳು ಜರುಗಲಿವೆ.</p>.<p>ನಗರದ ಕುಂಬಾರವಾಡ, ಚಿದ್ರಿ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ಪೂಜಾ ಕೈಂಕರ್ಯಗಳು ಜರುಗಿದವು. ಜನರು ಶ್ರದ್ಧಾ, ಭಕ್ತಿಯಿಂದ ಪಾಲ್ಗೊಂಡು, ದೇವರ ದರ್ಶನ ಪಡೆದರು. ಭಾನುವಾರವೇ ದೇವಸ್ಥಾನಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಿ, ತಳಿರು ತೋರಣಗಳಿಂದ ಅಲಂಕರಿಸಲಾಗಿದೆ.</p>.<p><strong>ಖರೀದಿ ಭರಾಟೆ: </strong></p>.<p>ನವರಾತ್ರಿಯ ಮೊದಲ ದಿನ ಹಬ್ಬದ ಖರೀದಿ ಭರಾಟೆ ಜೋರಾಗಿತ್ತು. ಸೋಮವಾರ ಬೆಳಕು ಹರಿಯುತ್ತಿದ್ದಂತೆ ಮಾರುಕಟ್ಟೆಗಳಲ್ಲಿ ಹೆಚ್ಚಿನ ಜನಸಂದಣಿ ಕಂಡು ಬಂತು.</p>.<p>ನಗರದ ಮೋಹನ್ ಮಾರ್ಕೆಟ್, ಶಿವನಗರದ ವಾಕಿಂಗ್ ಪಾತ್, ನೌಬಾದ್, ಭಗತ್ ಸಿಂಗ್ ವೃತ್ತ, ಬಸವೇಶ್ವರ ವೃತ್ತ, ಬೊಮ್ಮಗೊಂಡೇಶ್ವರ ವೃತ್ತ, ಹಾರೂರಗೇರಿ ಕಮಾನ್, ವಿದ್ಯಾನಗರ, ಮೈಲೂರ ಕ್ರಾಸ್, ಕುಂಬಾರವಾಡ, ಗುಂಪಾ ರಿಂಗ್ ರೋಡ್ ಎಲ್ಲೆಡೆ ಜನಜಾತ್ರೆ ಇತ್ತು. </p>.<p>ಕಬ್ಬು, ಬಾಳೆದಿಂಡು, ಹೂ, ಬೂದುಗುಂಬಳ, ಅಲಂಕಾರಿಕ ವಸ್ತುಗಳು, ಪೂಜಾ ಸಾಮಗ್ರಿಗಳು, ಹಣ್ಣು, ತರಕಾರಿಯನ್ನು ಜನ ಖರೀದಿಸಿದರು. ಬೆಳಿಗ್ಗೆ ಕೆಲಕಾಲ ಜಿಟಿಜಿಟಿ ಮಳೆಯಾಯಿತು. ಮಳೆಯಲ್ಲೇ ಅಗತ್ಯ ವಸ್ತುಗಳನ್ನು ಖರೀದಿಸಿದರು. ಕೆಲಸಮಯ ಬಿಡುವು ಕೊಟ್ಟ ಮಳೆ ಮಧ್ಯಾಹ್ನದಿಂದ ಬಿರುಸಾಗಿ ಸುರಿಯಿತು. ಆದರೆ, ಅಷ್ಟೊತ್ತಿಗೆ ವ್ಯಾಪಾರ ವಹಿವಾಟು ಬಹುತೇಕ ಪೂರ್ತಿಗೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>