<p><strong>ಬೀದರ್: </strong>ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ತಾಲ್ಲೂಕಿನ ಚಿಟ್ಟಾದ ನವೀನ್ ಪಬ್ಲಿಕ್ ಸ್ಕೂಲ್ನಲ್ಲಿ ವಿದ್ಯಾರ್ಥಿಗಳು ಸ್ವಚ್ಛತಾ ಅಭಿಯಾನ ನಡೆಸಿದರು.</p>.<p>ಶಾಲೆ ಆವರಣದಲ್ಲಿನ ಅನುಪಯುಕ್ತ ವಸ್ತು, ಕಸ ಕಡ್ಡಿಗಳನ್ನು ಸಂಗ್ರಹಿಸಿ, ವಿಲೇವಾರಿ ಮಾಡಿದರು.</p>.<p>ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಶಾಲೆ ಅಧ್ಯಕ್ಷ ಕಾಮಶೆಟ್ಟಿ ಚಿಕ್ಕಬಸೆ ಅವರು, ಸ್ವಚ್ಛತೆಯಿಂದ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯವಿದೆ ಎಂದು ಹೇಳಿದರು.</p>.<p>ಸ್ವಚ್ಛತಾ ಅಭಿಯಾನ ಗಾಂಧಿ ಜಯಂತಿಗೆ ಸೀಮಿತ ಆಗಬಾರದು. ಅದು ನಿರಂತರ ಪ್ರಕ್ರಿಯೆ ಆಗಬೇಕು ಎಂದು ತಿಳಿಸಿದರು.</p>.<p>ಮನೆ, ಸುತ್ತಮುತ್ತಲಿನ ಪರಿಸರ, ಹಳ್ಳಿ, ಪಟ್ಟಣ, ನಗರಗಳನ್ನು ಸ್ವಚ್ಛ, ಸುಂದರವಾಗಿ ಇಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಪಾಲಕರು ಮಕ್ಕಳಲ್ಲಿ ಬಾಲ್ಯದಿಂದಲೇ ಸ್ವಚ್ಛತೆ ಪ್ರಜ್ಞೆ ಮೂಡಿಸಬೇಕು. ಸಾಮಾಜಿಕ ಹೊಣೆಗಾರಿಕೆ ಕುರಿತು ಸಹ ತಿಳಿವಳಿಕೆ ನೀಡಬೇಕು ಎಂದು ಹೇಳಿದರು.</p>.<p>ಶಾಲೆ ಕಾರ್ಯದರ್ಶಿ ಶೀಲಾ ಚಿಕ್ಕಬಸೆ, ಮುಖ್ಯ ಶಿಕ್ಷಕಿ ಸುನೀತಾ, ಶಿಕ್ಷಕರಾದ ಸ್ವಾತಿ ಕುಡತೆ, ಗಂಗಮ್ಮ, ಮಹೇಶ, ಪಲ್ಲವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ತಾಲ್ಲೂಕಿನ ಚಿಟ್ಟಾದ ನವೀನ್ ಪಬ್ಲಿಕ್ ಸ್ಕೂಲ್ನಲ್ಲಿ ವಿದ್ಯಾರ್ಥಿಗಳು ಸ್ವಚ್ಛತಾ ಅಭಿಯಾನ ನಡೆಸಿದರು.</p>.<p>ಶಾಲೆ ಆವರಣದಲ್ಲಿನ ಅನುಪಯುಕ್ತ ವಸ್ತು, ಕಸ ಕಡ್ಡಿಗಳನ್ನು ಸಂಗ್ರಹಿಸಿ, ವಿಲೇವಾರಿ ಮಾಡಿದರು.</p>.<p>ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಶಾಲೆ ಅಧ್ಯಕ್ಷ ಕಾಮಶೆಟ್ಟಿ ಚಿಕ್ಕಬಸೆ ಅವರು, ಸ್ವಚ್ಛತೆಯಿಂದ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯವಿದೆ ಎಂದು ಹೇಳಿದರು.</p>.<p>ಸ್ವಚ್ಛತಾ ಅಭಿಯಾನ ಗಾಂಧಿ ಜಯಂತಿಗೆ ಸೀಮಿತ ಆಗಬಾರದು. ಅದು ನಿರಂತರ ಪ್ರಕ್ರಿಯೆ ಆಗಬೇಕು ಎಂದು ತಿಳಿಸಿದರು.</p>.<p>ಮನೆ, ಸುತ್ತಮುತ್ತಲಿನ ಪರಿಸರ, ಹಳ್ಳಿ, ಪಟ್ಟಣ, ನಗರಗಳನ್ನು ಸ್ವಚ್ಛ, ಸುಂದರವಾಗಿ ಇಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಪಾಲಕರು ಮಕ್ಕಳಲ್ಲಿ ಬಾಲ್ಯದಿಂದಲೇ ಸ್ವಚ್ಛತೆ ಪ್ರಜ್ಞೆ ಮೂಡಿಸಬೇಕು. ಸಾಮಾಜಿಕ ಹೊಣೆಗಾರಿಕೆ ಕುರಿತು ಸಹ ತಿಳಿವಳಿಕೆ ನೀಡಬೇಕು ಎಂದು ಹೇಳಿದರು.</p>.<p>ಶಾಲೆ ಕಾರ್ಯದರ್ಶಿ ಶೀಲಾ ಚಿಕ್ಕಬಸೆ, ಮುಖ್ಯ ಶಿಕ್ಷಕಿ ಸುನೀತಾ, ಶಿಕ್ಷಕರಾದ ಸ್ವಾತಿ ಕುಡತೆ, ಗಂಗಮ್ಮ, ಮಹೇಶ, ಪಲ್ಲವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>