ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಡಿಎ ಪರೀಕ್ಷೆಯಲ್ಲಿ ಉತ್ತೀರ್ಣ: ವಿದ್ಯಾರ್ಥಿಗಳ ಸನ್ಮಾನ

Last Updated 3 ಜುಲೈ 2021, 15:00 IST
ಅಕ್ಷರ ಗಾತ್ರ

ಬೀದರ್‌: ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ವಸತಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳಾದ ತಿಲಕ್‌ ಹಾಗೂ ನಾಗರಾಜ್‌ ಎನ್‌ಡಿಎ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಗಮನಾರ್ಹ ಸಾಧನೆ ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌.ಹೇಳಿದರು.

ಇಲ್ಲಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ವಸತಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳಾದ ತಿಲಕ್‌, ನಾಗರಾಜ್‌ ಅವರನ್ನು ಸನ್ಮಾನಿಸಿ ಮಾತನಾಡಿದರು.

ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಸೀಮಾ, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಭುವನೇಶ ಪಾಟೀಲ, ಬೀದರ್‌ ಉಪ ವಿಭಾಗಾಧಿಕಾರಿ ಗರೀಮಾ ಪನ್ವಾರ್‌, ಐಎಎಸ್‌ ಪ್ರೊಬೆಷನರಿ ಅಧಿಕಾರಿ ಕೀರ್ತನಾ, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬಾಲ ನ್ಯಾಯ ಮಂಡಳಿ ಸದಸ್ಯ ಶಶಿಧರ ಕೋಸಂಬೆ, ಆಡಳಿತಾಧಿಕಾರಿ ಮೋಹನರೆಡ್ಡಿ, ಪ್ರಾಚಾರ್ಯ ಬಸವರಾಜ್‌ ಮೊಳಕೀರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT