ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಡಿಎ ಪರೀಕ್ಷೆ: ತಿಲಕ್‌, ನಾಗರಾಜ್‌ ಉತ್ತೀರ್ಣ

Last Updated 2 ಜುಲೈ 2021, 4:39 IST
ಅಕ್ಷರ ಗಾತ್ರ

ಭಾಲ್ಕಿ: ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಕಾಲೇಜಿನ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ತಿಲಕ್‌ ಮತಗೊಂಡೆ, ನಾಗರಾಜ್‌ ಆರ್‌.ಹಾಲಿಮನಿ ಅವರು ಕೇಂದ್ರ ಲೋಕ ಸೇವಾ ಆಯೋಗ ನಡೆಸಿದ ರಾಷ್ಟ್ರೀಯ ರಕ್ಷಣಾ ಸಂಸ್ಥೆ(ಎನ್‌ಡಿಎ)ಯ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸಾಧನೆ ಮಾಡಿದ್ದಾರೆ ಎಂದು ಪ್ರಾಚಾರ್ಯ ಬಸವರಾಜ್‌ ಮೊಳಕೀರೆ ತಿಳಿಸಿದ್ದಾರೆ.

ವಿದ್ಯಾರ್ಥಿ ತಿಲಕ್‌, ಎನ್‌ಡಿಎದ ನೌಕಾದಳ, ನಾಗರಾಜ್‌ ವಾಯುದಳ ವಿಭಾಗಕ್ಕೆ ಸೇರಲು ಆಸಕ್ತಿ ಹೊಂದಿದ್ದು, ಮುಂದಿನ ಹಂತದ ಪರೀಕ್ಷೆಗಳಿಗೆ ಅರ್ಹತೆ ಗಿಟ್ಟಿಸಿದ್ದಾರೆ. ಕಳೆದ ಏಪ್ರಿಲ್‌ 18ರಂದು ಕೇಂದ್ರ ಲೋಕ ಸೇವಾ ಆಯೋಗವು ಈ ಪರೀಕ್ಷೆ ನಡೆಸಿತ್ತು. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರು, ಮಹಾಲಿಂಗ ಸ್ವಾಮೀಜಿ, ಮೋಹನರೆಡ್ಡಿ ಹರ್ಷ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT