ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವೀರಶೈವ- ಲಿಂಗಾಯತ ಅಭಿವೃದ್ಧಿ ನಿಗಮದ ಘೋಷಣೆ ಮಾಡಿದ ನಂತರ ಪತ್ರಿಕೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವಿಧ- ವಿಧವಾದ ಚರ್ಚೆ ನಡೆಯುತ್ತಿವೆ. ಅಭಿವೃದ್ಧಿ ನಿಗಮ ಹಾಗೂ ಮೀಸಲಾತಿಯ ಬೇಡಿಕೆಯನ್ನು ಲಿಂಗಾಯತರಲ್ಲಿರುವ ಬಡವರ, ಹಿಂದುಳಿದವರ ಪ್ರಗತಿಯ ಉದ್ದೇಶ ಹೊಂದಿದೆ. ಆದರೆ ಜೈನ್, ಬೌದ್ಧ, ಸಿಖ್ ಧರ್ಮಗಳಿಗೆ ಹೇಗೆ ಕೇಂದ್ರ ಸಕಾ೯ರ ಅಲ್ಪಸಂಖ್ಯಾತರೆಂದು ಗುರುತಿಸಿ, ಅವರ ಸಮಗ್ರ ಅಭಿವೃದ್ಧಿಗೆ ಮುಂದಾಗಿದೆ. ಆ ದಿಸೆಯಲ್ಲಿ ಲಿಂಗಾಯತರ ಪ್ರಗತಿಗಾಗಿ ಅಷ್ಟೇ ಅಲ್ಲದೆ ಬಸವಾದಿ ಶರಣರ ವಿಶ್ವಮಾನ್ಯ ತತ್ವಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ನಮ್ಮ ಅಸ್ಮಿತೆಯ ಉಳಿವಿಗಾಗಿ ಅಲ್ಪಸಂಖ್ಯಾತರ ಮಾನ್ಯತೆ ಅವಶ್ಯವಾಗಿದ್ದು, ರಾಜ್ಯದ ಮುಖ್ಯಮಂತ್ರಿ, ಜನಪ್ರತಿನಿಧಿಗಳು ಈ ವಿಷಯವನ್ನು ಕೇಂದ್ರ ಸಕಾ೯ರಕ್ಕೆ ಮನವರಿಕೆ ಮಾಡಿಕೊಡಬೇಕಾಗಿದೆ ಎಂದು ಹೇಳಿದರು.