‘ಕೊರೊನಾ ಬಿಕ್ಕಟ್ಟಿನ ನಡುವೆಯೇ ಕೇಂದ್ರ ಸರ್ಕಾರವು ನೀಟ್ ಹಾಗೂ ಜೆಇಇ ಪರೀಕ್ಷೆ ಮಾಡುತ್ತಿರುವುದು ಖಂಡನೀಯ. ಈಗ ಪರೀಕ್ಷೆ ನಡೆಸುವುದರಿಂದ ಬೇರೆ ರಾಜ್ಯದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುಲು ತೊಂದರೆ ಆಗಲಿದೆ. ಬಡ ಮಕ್ಕಳು ಉಳಿದುಕೊಳ್ಳಲು ಸಹ ಸಮಸ್ಯೆ ಉಂಟಾಗಲಿದೆ’ ಎಂದು ಪ್ರತಿಭಟನಾಕಾರರು ತಿಳಿಸಿದರು.