<p>ಚಿಟಗುಪ್ಪ: ‘ಜವಾಹರಲಾಲ್ ನೆಹರೂ ಅವರ ಚಿಂತನೆಗಳು ಎಲ್ಲರಿಗೂ ಮಾದರಿ’ ಎಂದು ಮುಖ್ಯಶಿಕ್ಷಕ ಧರ್ಮಪಾಲ್ ಹೇಳಿದರು.</p>.<p>ತಾಲ್ಲೂಕಿನ ಚಾಂಗಲೇರಾದ ಸರ್ಕಾರಿ ಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಅವರು ಉತ್ತಮ ವ್ಯಕ್ತಿಯಾದ ಕಾರಣ ಮಕ್ಕಳ ಹೆಸರಿನಲ್ಲಿ ತಮ್ಮ ಜನ್ಮದಿನ ಆಚರಿಸಲು ಕರೆ ನೀಡಿದರು ಎಂದರು.</p>.<p>ಕಾರ್ಯಕ್ರಮದಲ್ಲಿ ಅಣ್ಣಾಬಾವು ಸಾಠೆ ನ್ಯಾಸ್ನಿಂದ ಪ್ರತಿಭಾನ್ವಿತ ಮಕ್ಕಳನ್ನು ಸನ್ಮಾನಿಸಲಾಯಿತು.</p>.<p>ಸಿಬ್ಬಂದಿ ಪ್ರಭು ಭೂಮಾಕ್, ಶಿವಕುಮಾರ್ ಹೂಗಾರ, ರಾಜಪ್ಪ ಸಾಗರ್, ಮಲ್ಲಯ್ಯ ಸ್ವಾಮಿ, ಭುವನೇಶ್ವರಿ, ಕವಿತಾ, ರೈಚಲರಾಣಿ, ಎಂ.ಎಂ.ಮನೋಹರ್ ಮತ್ತು ಪಾಲಕರು ಇದ್ದರು. ಕಾರ್ಯಕ್ರಮದ ನಂತರ ಮಕ್ಕಳಿಗೆ ಸಿಹಿ ವಿತರಿಸಲಾಯಿತು.</p>.<p><strong>ಕರಕನಳ್ಳಿ</strong>: ತಾಲ್ಲೂಕಿನ ಕರಕನಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕ ವಿಠಲರೆಡ್ಡಿ ನೆಹರೂ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಮಾಲೆ ಅರ್ಪಿಸಿದರು. ಸಿಬ್ಬಂದಿ, ಶಾಲಾ ಮೇಲುಸ್ತುವಾರಿ ಸಮಿತಿ ಪದಾಧಿಕಾರಿಗಳು ಇದ್ದರು.</p>.<p>ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಟಗುಪ್ಪ: ‘ಜವಾಹರಲಾಲ್ ನೆಹರೂ ಅವರ ಚಿಂತನೆಗಳು ಎಲ್ಲರಿಗೂ ಮಾದರಿ’ ಎಂದು ಮುಖ್ಯಶಿಕ್ಷಕ ಧರ್ಮಪಾಲ್ ಹೇಳಿದರು.</p>.<p>ತಾಲ್ಲೂಕಿನ ಚಾಂಗಲೇರಾದ ಸರ್ಕಾರಿ ಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಅವರು ಉತ್ತಮ ವ್ಯಕ್ತಿಯಾದ ಕಾರಣ ಮಕ್ಕಳ ಹೆಸರಿನಲ್ಲಿ ತಮ್ಮ ಜನ್ಮದಿನ ಆಚರಿಸಲು ಕರೆ ನೀಡಿದರು ಎಂದರು.</p>.<p>ಕಾರ್ಯಕ್ರಮದಲ್ಲಿ ಅಣ್ಣಾಬಾವು ಸಾಠೆ ನ್ಯಾಸ್ನಿಂದ ಪ್ರತಿಭಾನ್ವಿತ ಮಕ್ಕಳನ್ನು ಸನ್ಮಾನಿಸಲಾಯಿತು.</p>.<p>ಸಿಬ್ಬಂದಿ ಪ್ರಭು ಭೂಮಾಕ್, ಶಿವಕುಮಾರ್ ಹೂಗಾರ, ರಾಜಪ್ಪ ಸಾಗರ್, ಮಲ್ಲಯ್ಯ ಸ್ವಾಮಿ, ಭುವನೇಶ್ವರಿ, ಕವಿತಾ, ರೈಚಲರಾಣಿ, ಎಂ.ಎಂ.ಮನೋಹರ್ ಮತ್ತು ಪಾಲಕರು ಇದ್ದರು. ಕಾರ್ಯಕ್ರಮದ ನಂತರ ಮಕ್ಕಳಿಗೆ ಸಿಹಿ ವಿತರಿಸಲಾಯಿತು.</p>.<p><strong>ಕರಕನಳ್ಳಿ</strong>: ತಾಲ್ಲೂಕಿನ ಕರಕನಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕ ವಿಠಲರೆಡ್ಡಿ ನೆಹರೂ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಮಾಲೆ ಅರ್ಪಿಸಿದರು. ಸಿಬ್ಬಂದಿ, ಶಾಲಾ ಮೇಲುಸ್ತುವಾರಿ ಸಮಿತಿ ಪದಾಧಿಕಾರಿಗಳು ಇದ್ದರು.</p>.<p>ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>