ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ನೂತನ ಡಿಡಿಪಿಯು ಆಂಜನೇಯಗೆ ಸನ್ಮಾನ

Last Updated 17 ಆಗಸ್ಟ್ 2021, 14:59 IST
ಅಕ್ಷರ ಗಾತ್ರ

ಬೀದರ್: ಪದವಿಪೂರ್ವ ಶಿಕ್ಷಣ ಇಲಾಖೆಯ ನೂತನ ಉಪ ನಿರ್ದೇಶಕ ಎಂ.ಆಂಜನೇಯ ಹಾಗೂ ನಿರ್ಗಮಿತ ಉಪನಿರ್ದೇಶಕ ಚಂದ್ರಕಾಂತ ಶಹಾಬಾದಕರ್ ಅವರನ್ನು ಜಿಲ್ಲಾ ಉಪನ್ಯಾಸಕರ ಸಂಘದ ವತಿಯಿಂದ ನಗರದಲ್ಲಿ ಮಂಗಳವಾರ ಸನ್ಮಾನಿಸಲಾಯಿತು.

ಎಂ.ಆಂಜನೇಯ ಮಾತನಾಡಿ, ಕೋವಿಡ್ ನಡುವೆಯೂ ಎಲ್ಲರ ಸಹಕಾರದೊಂದಿಗೆ ಜಿಲ್ಲೆಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕೊಡಲು ಹಾಗೂ ಜಿಲ್ಲೆಯ ಫಲಿತಾಂಶ ವೃದ್ಧಿಗೆ ಶ್ರಮಿಸಲಾಗುವುದು ಎಂದು ತಿಳಿಸಿದರು.

ಉಪನ್ಯಾಸಕರು ಆನ್‍ಲೈನ್ ಅಥವಾ ಆಫ್‍ಲೈನ್ ತರಗತಿಗಳನ್ನು ವೇಳಾಪಟ್ಟಿಗೆ ಅನುಗುಣವಾಗಿ ನಡೆಸಬೇಕು. ಯಾರೂ ಕೆಲಸದಲ್ಲಿ ಅಸಡ್ಡೆ ತೋರಿಸಬಾರದು ಎಂದು ಹೇಳಿದರು.

ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಓಂಕಾರ ಸೂರ್ಯವಂಶಿ, ಪ್ರಾಚಾರ್ಯ ವೈಜಿನಾಥ ಕಾಳೆ, ಉಪನ್ಯಾಸಕ ಶ್ರೀನಿವಾಸ ಜಿವಣಗಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಅಧೀಕ್ಷಕ ಸಂಗನಬಸವ, ಮೀನಾಕ್ಷಿ, ಶಕುಂತಲಾ, ರವಿ ಮೋರೆ, ಸಿದ್ರಾಮ ಜ್ಯಾಂತಿಕರ್, ಸಂಜೀವ ರೋಗನ್, ಸಂಗಮೇಶ ಸೋನಾರ್, ರಮೇಶ, ಅನಿಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT