<p><strong>ಬೀದರ್: </strong>ಪದವಿಪೂರ್ವ ಶಿಕ್ಷಣ ಇಲಾಖೆಯ ನೂತನ ಉಪ ನಿರ್ದೇಶಕ ಎಂ.ಆಂಜನೇಯ ಹಾಗೂ ನಿರ್ಗಮಿತ ಉಪನಿರ್ದೇಶಕ ಚಂದ್ರಕಾಂತ ಶಹಾಬಾದಕರ್ ಅವರನ್ನು ಜಿಲ್ಲಾ ಉಪನ್ಯಾಸಕರ ಸಂಘದ ವತಿಯಿಂದ ನಗರದಲ್ಲಿ ಮಂಗಳವಾರ ಸನ್ಮಾನಿಸಲಾಯಿತು.</p>.<p>ಎಂ.ಆಂಜನೇಯ ಮಾತನಾಡಿ, ಕೋವಿಡ್ ನಡುವೆಯೂ ಎಲ್ಲರ ಸಹಕಾರದೊಂದಿಗೆ ಜಿಲ್ಲೆಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕೊಡಲು ಹಾಗೂ ಜಿಲ್ಲೆಯ ಫಲಿತಾಂಶ ವೃದ್ಧಿಗೆ ಶ್ರಮಿಸಲಾಗುವುದು ಎಂದು ತಿಳಿಸಿದರು.</p>.<p>ಉಪನ್ಯಾಸಕರು ಆನ್ಲೈನ್ ಅಥವಾ ಆಫ್ಲೈನ್ ತರಗತಿಗಳನ್ನು ವೇಳಾಪಟ್ಟಿಗೆ ಅನುಗುಣವಾಗಿ ನಡೆಸಬೇಕು. ಯಾರೂ ಕೆಲಸದಲ್ಲಿ ಅಸಡ್ಡೆ ತೋರಿಸಬಾರದು ಎಂದು ಹೇಳಿದರು.</p>.<p>ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಓಂಕಾರ ಸೂರ್ಯವಂಶಿ, ಪ್ರಾಚಾರ್ಯ ವೈಜಿನಾಥ ಕಾಳೆ, ಉಪನ್ಯಾಸಕ ಶ್ರೀನಿವಾಸ ಜಿವಣಗಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಅಧೀಕ್ಷಕ ಸಂಗನಬಸವ, ಮೀನಾಕ್ಷಿ, ಶಕುಂತಲಾ, ರವಿ ಮೋರೆ, ಸಿದ್ರಾಮ ಜ್ಯಾಂತಿಕರ್, ಸಂಜೀವ ರೋಗನ್, ಸಂಗಮೇಶ ಸೋನಾರ್, ರಮೇಶ, ಅನಿಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಪದವಿಪೂರ್ವ ಶಿಕ್ಷಣ ಇಲಾಖೆಯ ನೂತನ ಉಪ ನಿರ್ದೇಶಕ ಎಂ.ಆಂಜನೇಯ ಹಾಗೂ ನಿರ್ಗಮಿತ ಉಪನಿರ್ದೇಶಕ ಚಂದ್ರಕಾಂತ ಶಹಾಬಾದಕರ್ ಅವರನ್ನು ಜಿಲ್ಲಾ ಉಪನ್ಯಾಸಕರ ಸಂಘದ ವತಿಯಿಂದ ನಗರದಲ್ಲಿ ಮಂಗಳವಾರ ಸನ್ಮಾನಿಸಲಾಯಿತು.</p>.<p>ಎಂ.ಆಂಜನೇಯ ಮಾತನಾಡಿ, ಕೋವಿಡ್ ನಡುವೆಯೂ ಎಲ್ಲರ ಸಹಕಾರದೊಂದಿಗೆ ಜಿಲ್ಲೆಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕೊಡಲು ಹಾಗೂ ಜಿಲ್ಲೆಯ ಫಲಿತಾಂಶ ವೃದ್ಧಿಗೆ ಶ್ರಮಿಸಲಾಗುವುದು ಎಂದು ತಿಳಿಸಿದರು.</p>.<p>ಉಪನ್ಯಾಸಕರು ಆನ್ಲೈನ್ ಅಥವಾ ಆಫ್ಲೈನ್ ತರಗತಿಗಳನ್ನು ವೇಳಾಪಟ್ಟಿಗೆ ಅನುಗುಣವಾಗಿ ನಡೆಸಬೇಕು. ಯಾರೂ ಕೆಲಸದಲ್ಲಿ ಅಸಡ್ಡೆ ತೋರಿಸಬಾರದು ಎಂದು ಹೇಳಿದರು.</p>.<p>ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಓಂಕಾರ ಸೂರ್ಯವಂಶಿ, ಪ್ರಾಚಾರ್ಯ ವೈಜಿನಾಥ ಕಾಳೆ, ಉಪನ್ಯಾಸಕ ಶ್ರೀನಿವಾಸ ಜಿವಣಗಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಅಧೀಕ್ಷಕ ಸಂಗನಬಸವ, ಮೀನಾಕ್ಷಿ, ಶಕುಂತಲಾ, ರವಿ ಮೋರೆ, ಸಿದ್ರಾಮ ಜ್ಯಾಂತಿಕರ್, ಸಂಜೀವ ರೋಗನ್, ಸಂಗಮೇಶ ಸೋನಾರ್, ರಮೇಶ, ಅನಿಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>