<p><strong>ಬಸವಕಲ್ಯಾಣ</strong>: ರಾತ್ರಿ ನಗರದಿಂದ ಹುಮನಾಬಾದ್ ಮೂಲಕ ಕಲಬುರಗಿಗೆ ಹೋಗಿ ಬರುವುದಕ್ಕೆ ಬಸ್ ಸಂಚಾರ ಇಲ್ಲದೆ ಜನರು ಪರದಾಡುತ್ತಿರುವ ಬಗ್ಗೆ ಬುಧವಾರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಚರ್ಚಿಸಲಾಯಿತು.</p>.<p>ಸಮಿತಿ ಅಧ್ಯಕ್ಷ ನೀಲಕಂಠ ರಾಠೋಡ ಮಾತನಾಡಿ, ರಾತ್ರಿ 8 ಮತ್ತು 10 ಗಂಟೆಯ ಮಧ್ಯದಲ್ಲಿ ಈ ಮಾರ್ಗದಲ್ಲಿ ಬಸ್ ಸಂಚರಿಸುವಂತೆ ಕ್ರಮ ತೆಗದುಕೊಳ್ಳಬೇಕು ಎಂದು ಸಂಬಂಧಿತರಿಗೆ ಸಲಹೆ ನೀಡಿದರು. ಎಸ್ಪಿಟಿಪಿ ಯೋಜನೆ ಅಡಿಯಲ್ಲಿ ತಾಂಡಾಗಳಲ್ಲಿ ಜೆಸ್ಕಾಂ ಇಲಾಖೆಯಿಂದ ಕೈಗೊಳ್ಳಬೇಕಾದ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಬಟಗೇರಾ ಗ್ರಾಮದಲ್ಲಿ ಜೆಸ್ಕಾಂದಿಂದ ಲೈನ್ ಮ್ಯಾನ್ ಸಿಬ್ಬಂದಿ ನೇಮಿಸಬೇಕು ಎಂದು ಹೇಳಿದರು.</p>.<p>ಯುವನಿಧಿ ಅರ್ಜಿಗಳನ್ನು ಶೀಘ್ರ ವಿಲೇವಾರಿಗೊಳಿಸಬೇಕು. ಪಡಿತರ ಅಂಗಡಿಗಳಲ್ಲಿನ ವ್ಯವಸ್ಥೆ ಸರಿಪಡಿಸಬೇಕು. ಆಹಾರಧಾನ್ಯ ಅರ್ಹರಿಗೆ ತಲುಪಿಸಬೇಕು. ಕಾಳಸಂತೆಯಲ್ಲಿ ಮಾರಾಟ ಆಗುವುದನ್ನು ತಡೆಯಬೇಕು ಎಂದರು.</p>.<p>ಇಒ ರಮೇಶ ಸುಲ್ಫಿ ಮಾತನಾಡಿ, ಪಡಿತರ ವಿತರಣೆ ಅಂಗಡಿಗಳಲ್ಲಿ ಗ್ಯಾರಂಟಿ ಯೋಜನೆಗಳ ಮಾಹಿತಿಯುಳ್ಳ ಫಲಕ ಕಡ್ಡಾಯವಾಗಿ ಅಳವಡಿಸಬೇಕು ಎಂದು ಸಲಹೆ ನೀಡಿದರು.</p>.<p>ಸಮಿತಿ ಸದಸ್ಯರಾದ ಕುತ್ಬುದ್ದೀನ್, ಪ್ರೀತೀಶ ಮುಳೆ, ಯುವರಾಜ, ದಶರಥ ಶಿವಪ್ಪ, ಸಂಜೀವಕುಮಾರ, ಅನಿಲ, ಮನೋಹರ, ದಿನೇಶ, ಮಾಧವ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ</strong>: ರಾತ್ರಿ ನಗರದಿಂದ ಹುಮನಾಬಾದ್ ಮೂಲಕ ಕಲಬುರಗಿಗೆ ಹೋಗಿ ಬರುವುದಕ್ಕೆ ಬಸ್ ಸಂಚಾರ ಇಲ್ಲದೆ ಜನರು ಪರದಾಡುತ್ತಿರುವ ಬಗ್ಗೆ ಬುಧವಾರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಚರ್ಚಿಸಲಾಯಿತು.</p>.<p>ಸಮಿತಿ ಅಧ್ಯಕ್ಷ ನೀಲಕಂಠ ರಾಠೋಡ ಮಾತನಾಡಿ, ರಾತ್ರಿ 8 ಮತ್ತು 10 ಗಂಟೆಯ ಮಧ್ಯದಲ್ಲಿ ಈ ಮಾರ್ಗದಲ್ಲಿ ಬಸ್ ಸಂಚರಿಸುವಂತೆ ಕ್ರಮ ತೆಗದುಕೊಳ್ಳಬೇಕು ಎಂದು ಸಂಬಂಧಿತರಿಗೆ ಸಲಹೆ ನೀಡಿದರು. ಎಸ್ಪಿಟಿಪಿ ಯೋಜನೆ ಅಡಿಯಲ್ಲಿ ತಾಂಡಾಗಳಲ್ಲಿ ಜೆಸ್ಕಾಂ ಇಲಾಖೆಯಿಂದ ಕೈಗೊಳ್ಳಬೇಕಾದ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಬಟಗೇರಾ ಗ್ರಾಮದಲ್ಲಿ ಜೆಸ್ಕಾಂದಿಂದ ಲೈನ್ ಮ್ಯಾನ್ ಸಿಬ್ಬಂದಿ ನೇಮಿಸಬೇಕು ಎಂದು ಹೇಳಿದರು.</p>.<p>ಯುವನಿಧಿ ಅರ್ಜಿಗಳನ್ನು ಶೀಘ್ರ ವಿಲೇವಾರಿಗೊಳಿಸಬೇಕು. ಪಡಿತರ ಅಂಗಡಿಗಳಲ್ಲಿನ ವ್ಯವಸ್ಥೆ ಸರಿಪಡಿಸಬೇಕು. ಆಹಾರಧಾನ್ಯ ಅರ್ಹರಿಗೆ ತಲುಪಿಸಬೇಕು. ಕಾಳಸಂತೆಯಲ್ಲಿ ಮಾರಾಟ ಆಗುವುದನ್ನು ತಡೆಯಬೇಕು ಎಂದರು.</p>.<p>ಇಒ ರಮೇಶ ಸುಲ್ಫಿ ಮಾತನಾಡಿ, ಪಡಿತರ ವಿತರಣೆ ಅಂಗಡಿಗಳಲ್ಲಿ ಗ್ಯಾರಂಟಿ ಯೋಜನೆಗಳ ಮಾಹಿತಿಯುಳ್ಳ ಫಲಕ ಕಡ್ಡಾಯವಾಗಿ ಅಳವಡಿಸಬೇಕು ಎಂದು ಸಲಹೆ ನೀಡಿದರು.</p>.<p>ಸಮಿತಿ ಸದಸ್ಯರಾದ ಕುತ್ಬುದ್ದೀನ್, ಪ್ರೀತೀಶ ಮುಳೆ, ಯುವರಾಜ, ದಶರಥ ಶಿವಪ್ಪ, ಸಂಜೀವಕುಮಾರ, ಅನಿಲ, ಮನೋಹರ, ದಿನೇಶ, ಮಾಧವ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>