<p><strong>ಬೀದರ್: </strong>ನೀನಾಸಂ ಸಹಕಾರದೊಂದಿಗೆ ನಗರದ ಜಿಲ್ಲಾ ರಂಗಮಂದಿರದಲ್ಲಿ ಡಿಸೆಂಬರ್ 13, 14 ಮತ್ತು 15 ರಂದು ರಂಗತೋರಣ ನಾಟಕೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ರಂಗತೋರಣದ ರಾಜ್ಯ ಕಾರ್ಯದರ್ಶಿ ಪ್ರಭುದೇವ ಕಪ್ಪಗಲ್ಲು ಹಾಗೂ ಕಲ್ಯಾಣ ರಂಗತೋರಣದ ಸದಸ್ಯ ಶಶಿಧರ ಹೊಸಳ್ಳಿ ತಿಳಿಸಿದರು.</p>.<p>ಬೆಂಗಳೂರು, ಮೈಸೂರು, ಶಿವಮೊಗ್ಗದಂತಹ ನಗರಗಳಲ್ಲಿಯೇ ಹೊಸ ಹೊಸ ನಾಟಕಗಳು ಪ್ರದರ್ಶನಗೊಳ್ಳುತ್ತವೆ. ಹೀಗಾಗಿ ರಂಗತೋರಣವು ಪ್ರತಿ ವರ್ಷ ನಾಡಿನ ಪ್ರಮುಖ ರಂಗ ತಂಡಗಳನ್ನು ಆಹ್ವಾನಿಸಿ, ಈ ಭಾಗದಲ್ಲಿ ಉತ್ತಮ ನಾಟಕಗಳನ್ನು ಪ್ರದರ್ಶಿಸುತ್ತ ಬಂದಿದೆ. ರಂಗಮದಿರದಲ್ಲಿ ಮೂರು ದಿನಗಳ ಕಾಲ ಪ್ರತಿ ದಿನ ಸಂಜೆ 6.30ಕ್ಕೆ ನಾಟಕ ಪ್ರದರ್ಶನ ನಡೆಯಲಿದೆ ಎಂದು ಸೋಮವಾರ ಇಲ್ಲಿ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.</p>.<p>13 ರಂದು ಬೆಳಗಾವಿಯ ಮಹಾಂತೇಶ ರಾಮದುರ್ಗ ಸೈ ನಿರ್ದೇಶನದ ‘ದೂರದೇಶದ ಹಕ್ಕಿ’, 14 ರಂದು ರಂಗ ನಿರ್ದೇಶಕ ಕೆ.ವಿ.ಅಕ್ಷರ ನಿರ್ದೇಶನದ ‘ಸೇತುಬಂಧನ’ ಹಾಗೂ 15 ರಂದು ಜೋಸೆಫ್ ಜಾನ್ ನಿರ್ದೇಶನದ‘ಆಶ್ಚರ್ಯ ಚೂಡಾಮಣಿ’ ನಾಟಕ ಪ್ರದರ್ಶನಗೊಳ್ಳಲಿದೆ.</p>.<p>ಅಂಬರೀಷ ಬಟನಾಪೂರೆ, ವೀರೇಶ ಸ್ವಾಮಿ ಮಾಧ್ಯಮಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ನೀನಾಸಂ ಸಹಕಾರದೊಂದಿಗೆ ನಗರದ ಜಿಲ್ಲಾ ರಂಗಮಂದಿರದಲ್ಲಿ ಡಿಸೆಂಬರ್ 13, 14 ಮತ್ತು 15 ರಂದು ರಂಗತೋರಣ ನಾಟಕೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ರಂಗತೋರಣದ ರಾಜ್ಯ ಕಾರ್ಯದರ್ಶಿ ಪ್ರಭುದೇವ ಕಪ್ಪಗಲ್ಲು ಹಾಗೂ ಕಲ್ಯಾಣ ರಂಗತೋರಣದ ಸದಸ್ಯ ಶಶಿಧರ ಹೊಸಳ್ಳಿ ತಿಳಿಸಿದರು.</p>.<p>ಬೆಂಗಳೂರು, ಮೈಸೂರು, ಶಿವಮೊಗ್ಗದಂತಹ ನಗರಗಳಲ್ಲಿಯೇ ಹೊಸ ಹೊಸ ನಾಟಕಗಳು ಪ್ರದರ್ಶನಗೊಳ್ಳುತ್ತವೆ. ಹೀಗಾಗಿ ರಂಗತೋರಣವು ಪ್ರತಿ ವರ್ಷ ನಾಡಿನ ಪ್ರಮುಖ ರಂಗ ತಂಡಗಳನ್ನು ಆಹ್ವಾನಿಸಿ, ಈ ಭಾಗದಲ್ಲಿ ಉತ್ತಮ ನಾಟಕಗಳನ್ನು ಪ್ರದರ್ಶಿಸುತ್ತ ಬಂದಿದೆ. ರಂಗಮದಿರದಲ್ಲಿ ಮೂರು ದಿನಗಳ ಕಾಲ ಪ್ರತಿ ದಿನ ಸಂಜೆ 6.30ಕ್ಕೆ ನಾಟಕ ಪ್ರದರ್ಶನ ನಡೆಯಲಿದೆ ಎಂದು ಸೋಮವಾರ ಇಲ್ಲಿ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.</p>.<p>13 ರಂದು ಬೆಳಗಾವಿಯ ಮಹಾಂತೇಶ ರಾಮದುರ್ಗ ಸೈ ನಿರ್ದೇಶನದ ‘ದೂರದೇಶದ ಹಕ್ಕಿ’, 14 ರಂದು ರಂಗ ನಿರ್ದೇಶಕ ಕೆ.ವಿ.ಅಕ್ಷರ ನಿರ್ದೇಶನದ ‘ಸೇತುಬಂಧನ’ ಹಾಗೂ 15 ರಂದು ಜೋಸೆಫ್ ಜಾನ್ ನಿರ್ದೇಶನದ‘ಆಶ್ಚರ್ಯ ಚೂಡಾಮಣಿ’ ನಾಟಕ ಪ್ರದರ್ಶನಗೊಳ್ಳಲಿದೆ.</p>.<p>ಅಂಬರೀಷ ಬಟನಾಪೂರೆ, ವೀರೇಶ ಸ್ವಾಮಿ ಮಾಧ್ಯಮಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>