ಔರಾದ್- ಬೆಳಕುಣಿ ನಡುವಿನ ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡಗಳು ಬಿದ್ದಿವೆ. ಇದರಿಂದ ವಿದ್ಯಾರ್ಥಿಗಳಿಗೆ ಶಾಲೆ ಕಾಲೇಜಿಗೆ ಹೋಗಲು ತೊಂದರೆಯಾಗಿದೆ. ಇನ್ನು ಬೀದರ್-ಭಾಲ್ಕಿಗೆ ಹೋಗುವ ದಾರಿಯಲ್ಲಿನ ಸೇತುವೆ ಶಿಥಿಲಗೊಂಡಿದೆ. ಈಚೆಗೆ ಸುರಿದ ಮಳೆಯಿಂದ ಅರ್ಧ ಭಾಗ ಕೊಚ್ಚಿ ಹೋಗಿದೆ. ಹೀಗಾಗಿ ಸ್ವಲ್ಪ ಮಳೆಯಾದರೂ ಬೀದರ್-ಭಾಲ್ಕಿ ನಡುವಿನ ಸಂಪರ್ಕ ಕಡಿತವಾಗುತ್ತದೆ. ಈ ಕುರಿತು ಸಾಕಷ್ಟು ಬಾರಿ ಲೋಕೋಪ ಯೋಗಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.