ಕೇಂದ್ರ ಬಸ್ ನಿಲ್ದಾಣದ ಆವರಣದಿಂದ ಕಾರ್ಮಿಕರು ಪ್ರತಿಭಟನಾ ಮೆರವಣಿಗೆ ಆರಂಭಿಸಿ ಅಂಬೇಡ್ಕರ್ ವೃತ್ತಕ್ಕೆ ಬರಲಿದ್ದಾರೆ. ಅಲ್ಲಿ ಅಂಗನವಾಡಿ ಕಾರ್ಯಕರ್ತರು, ಕಿಸಾನಸಭಾ, ರೈತ ಸಂಘದ ಕಾರ್ಯಕರ್ತರೂ ಸೇರಲಿದ್ದಾರೆ. ಅಂದಾಜು ಒಂದು ಸಾವಿರ ಕಾರ್ಯಕರ್ತರು ಮೆರವಣಿಗೆಯಲ್ಲಿ ಹೊರಟು ಜಿಲ್ಲಾಧಿಕಾರಿಗೆ ಮನವಿಪತ್ರ ಸಲ್ಲಿಸಲಿದ್ದಾರೆ.