<p><strong>ಬೀದರ್:</strong> ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ರಾಜ್ಯದ ವಿವಿಧೆಡೆ ಗುರುವಾರ ಪ್ರತಿಭಟನೆ ನಡೆದರೂ ಜಿಲ್ಲೆಯಲ್ಲಿ ಯಾವುದೇ ರೀತಿಯ ಪ್ರತಿಭಟನೆ ನಡೆಯಲಿಲ್ಲ.<br />ಎರಡು ದಿನಗಳ ಹಿಂದೆಯೇ ನಗರದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಹೀಗಾಗಿ ಯಾವ ಸಂಘಟನೆಯೂ ಬಂದ್ಗೆ ಕರೆ ನೀಡಿರಲಿಲ್ಲ.</p>.<p>ಜಿಲ್ಲೆಯಲ್ಲಿ ಜನಜೀವನ ಸಹಜವಾಗಿತ್ತು. ಅಂಗಡಿ ಮುಂಗಟ್ಟುಗಳು ತೆರೆದಿದ್ದವು. ಬಸ್ ಹಾಗೂ ಆಟೊ ಸಂಚಾರ ಎಂದಿನಂತೆ ಇತ್ತು. ಆದರೂ, ಪೊಲೀಸರು ಬಂದೋಬಸ್ತ್ಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದರು.</p>.<p>ಬಸವಕಲ್ಯಾಣದಲ್ಲಿ ಶಾಸಕ ಬಿ.ನಾರಾಯಣರಾವ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ವಿವಿಧ ಸಂಘಟನೆಗಳ ಮುಖಂಡರು ಯೋಚಿಸಿದ್ದರು. ಜಿಲ್ಲಾ ಆಡಳಿತ ಮೂರು ದಿನ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ ಕಾರಣ ಅಂತಿಮ ಕ್ಷಣದಲ್ಲಿ ಪ್ರತಿಭಟನೆ ಕೈಬಿಡಲಾಗಿದೆ ಎಂದು ತಿಳಿದು ಬಂದಿದೆ.</p>.<p>ಬೀದರ್ ನಗರದಲ್ಲಿ ನವೆಂಬರ್ 13 ರಂದು ವಿವಿಧ ಸಂಘಟನೆಗಳ ಕಾರ್ಯಕರ್ತರು ಜಮಿಯತ್ ಉಲಮಾ ಎ ಹಿಂದ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು.</p>.<p>ಮಾಜಿ ಶಾಸಕ ಸೈಯದ್ ಜುಲ್ಫೇಕಾರ್ ಹಾಸ್ಮಿ, ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಮಹಮ್ಮದ್ ಅಸದುದ್ದಿನ್, ಎಐಎಂಐಎಂ ಬೀದರ್ ಘಟಕದ ಅಧ್ಯಕ್ಷ ಸೈಯದ್ ಮನ್ಸೂರ್ ಖಾದ್ರಿ, ಜಮಿಯತ್ ಉಲಮಾ ಎ ಹಿಂದ್ ಪ್ರಧಾನ ಕಾರ್ಯದರ್ಶಿ ಮೌಲಾನಾ ಮುಹಮ್ಮದ್ ತಸದ್ದುಕ್ ನದ್ವಿ, ನಗರಸಭೆ ಮಾಜಿ ಸದಸ್ಯ ನಬಿ ಖುರೇಶಿ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಬಾಬುರಾವ್ ಹೊನ್ನಾ, ವಹೀದ್ ಲಖನ್, ಸೈಯದ್ ಸರಫರಾಜ್ ಹಾಸ್ಮಿ ಹಾಗೂ ಜಫರುಲ್ಲಾಖಾನ್ ನೇತೃತ್ವ ವಹಿಸಿದ್ದರು.</p>.<p>ಡಿಸೆಂಬರ್ 17 ರಂದು ಸ್ಟುಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೇಶನ್ ಆಫ್ ಇಂಡಿಯಾದ (ಎಸ್ಐಒ) ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ರಾಜ್ಯದ ವಿವಿಧೆಡೆ ಗುರುವಾರ ಪ್ರತಿಭಟನೆ ನಡೆದರೂ ಜಿಲ್ಲೆಯಲ್ಲಿ ಯಾವುದೇ ರೀತಿಯ ಪ್ರತಿಭಟನೆ ನಡೆಯಲಿಲ್ಲ.<br />ಎರಡು ದಿನಗಳ ಹಿಂದೆಯೇ ನಗರದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಹೀಗಾಗಿ ಯಾವ ಸಂಘಟನೆಯೂ ಬಂದ್ಗೆ ಕರೆ ನೀಡಿರಲಿಲ್ಲ.</p>.<p>ಜಿಲ್ಲೆಯಲ್ಲಿ ಜನಜೀವನ ಸಹಜವಾಗಿತ್ತು. ಅಂಗಡಿ ಮುಂಗಟ್ಟುಗಳು ತೆರೆದಿದ್ದವು. ಬಸ್ ಹಾಗೂ ಆಟೊ ಸಂಚಾರ ಎಂದಿನಂತೆ ಇತ್ತು. ಆದರೂ, ಪೊಲೀಸರು ಬಂದೋಬಸ್ತ್ಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದರು.</p>.<p>ಬಸವಕಲ್ಯಾಣದಲ್ಲಿ ಶಾಸಕ ಬಿ.ನಾರಾಯಣರಾವ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ವಿವಿಧ ಸಂಘಟನೆಗಳ ಮುಖಂಡರು ಯೋಚಿಸಿದ್ದರು. ಜಿಲ್ಲಾ ಆಡಳಿತ ಮೂರು ದಿನ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ ಕಾರಣ ಅಂತಿಮ ಕ್ಷಣದಲ್ಲಿ ಪ್ರತಿಭಟನೆ ಕೈಬಿಡಲಾಗಿದೆ ಎಂದು ತಿಳಿದು ಬಂದಿದೆ.</p>.<p>ಬೀದರ್ ನಗರದಲ್ಲಿ ನವೆಂಬರ್ 13 ರಂದು ವಿವಿಧ ಸಂಘಟನೆಗಳ ಕಾರ್ಯಕರ್ತರು ಜಮಿಯತ್ ಉಲಮಾ ಎ ಹಿಂದ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು.</p>.<p>ಮಾಜಿ ಶಾಸಕ ಸೈಯದ್ ಜುಲ್ಫೇಕಾರ್ ಹಾಸ್ಮಿ, ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಮಹಮ್ಮದ್ ಅಸದುದ್ದಿನ್, ಎಐಎಂಐಎಂ ಬೀದರ್ ಘಟಕದ ಅಧ್ಯಕ್ಷ ಸೈಯದ್ ಮನ್ಸೂರ್ ಖಾದ್ರಿ, ಜಮಿಯತ್ ಉಲಮಾ ಎ ಹಿಂದ್ ಪ್ರಧಾನ ಕಾರ್ಯದರ್ಶಿ ಮೌಲಾನಾ ಮುಹಮ್ಮದ್ ತಸದ್ದುಕ್ ನದ್ವಿ, ನಗರಸಭೆ ಮಾಜಿ ಸದಸ್ಯ ನಬಿ ಖುರೇಶಿ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಬಾಬುರಾವ್ ಹೊನ್ನಾ, ವಹೀದ್ ಲಖನ್, ಸೈಯದ್ ಸರಫರಾಜ್ ಹಾಸ್ಮಿ ಹಾಗೂ ಜಫರುಲ್ಲಾಖಾನ್ ನೇತೃತ್ವ ವಹಿಸಿದ್ದರು.</p>.<p>ಡಿಸೆಂಬರ್ 17 ರಂದು ಸ್ಟುಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೇಶನ್ ಆಫ್ ಇಂಡಿಯಾದ (ಎಸ್ಐಒ) ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>