ಹುಬ್ಬಳ್ಳಿ, ಬೆಳಗಾವಿ, ದಾವಣಗೆರೆ, ಬಳ್ಳಾರಿ ಬಸ್ಗಳನ್ನು ಆರಂಭಿಸುವಂತೆ ಪ್ರಯಾಣಿಕರು ಮನವಿ ಮಾಡುತ್ತಿದ್ದಾರೆ. ಆದರೆ, ಬಸ್ ಸಂಚಾರ ಆರಂಭಿಸಲು ಅಗತ್ಯವಿರುವಷ್ಟು ಪ್ರಯಾಣಿಕರು ಬಾರದ ಕಾರಣ ಬಸ್ಗಳನ್ನು ಆರಂಭಿಸಲಿಲ್ಲ. ಕನಿಷ್ಠ 30 ಜನ ಬಂದರೂ ಬಸ್ ಆರಂಭಿಸಲಾಗುವುದು ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೀದರ್ ವಿಭಾಗೀಯ ಸಂಚಾರ ನಿಯಂತ್ರಣಾಧಿಕಾರಿ ಶ್ರೀಮಂತ ಘಂಟೆ ತಿಳಿಸಿದರು.