ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಅವರು ಮೇಲಿಂದ ಮೇಲೆ ವಸತಿ ನಿಲಯಗಳಿಗೆ ಅನಿರೀಕ್ಷಿತ ಭೇಟಿ ಕೊಟ್ಟು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಚುರುಕು ಮುಟ್ಟಿಸುತ್ತಿದ್ದಾರೆ. ವಸತಿ ನಿಲಯಗಳಲ್ಲಿ ಇರುವ ವಿದ್ಯಾರ್ಥಿಗಳು ಬಡವರ ಮಕ್ಕಳೇ ಆಗಿರುತ್ತಾರೆ. ಹೀಗಾಗಿ ಅವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಭೆಗಳಲ್ಲಿ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.