ಬೀದರ್: ಜಿಲ್ಲೆಯ ಕೆಲವೆಡೆ ಭಾನುವಾರ ಸಾಧಾರಣ ಮಳೆಯಾಗಿದೆ. ಬೀದರ್ ಗ್ರಾಮೀಣ, ಹುಮನಾಬಾದ್, ಚಿಟಗುಪ್ಪ ಹಾಗೂ ಹುಲಸೂರು ತಾಲ್ಲೂಕಿನಲ್ಲಿ ಮಳೆ ಸುರಿದಿದೆ.
ನೆರೆಯ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಧಣೆಗಾಂವ ಜಲಾಶಯದಿಂದ ನೀರು ಹೊರಗೆ ಬಿಡಲಾಗಿದೆ. ಹುಲಸೂರು ಸಮೀಪದ ವಾಜರಖೇಡ ನೆಲ ಮಟ್ಟದ ಸೇತುವೆ ಮುಳುಗಡೆಯಾಗಿದೆ. ವಾಹನ ಸಂಚಾರ ಸ್ಥಗಿತಗೊಂಡಿದೆ.