ನಗರದ ಅನೇಕ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನಿಂತುಕೊಂಡಿತ್ತು. ಗುಂಪಾ ರಿಂಗ್ ರಸ್ತೆ, ಮೈಲೂರು ಕ್ರಾಸ್, ಹಾರೂರಗೇರಿ ಕಮಾನ್, ಬೊಮ್ಮಗೊಂಡೇಶ್ವರ ವೃತ್ತದಿಂದ ಅಶೋಕ ಹೋಟೆಲ್ಗೆ ಸಂಪರ್ಕ ಕಲ್ಪಿಸುವ ರೈಲ್ವೆ ಕೆಳ ಸೇತುವೆ, ನಯಾಕಮಾನ್, ಸರ್ಕಾರಿ ಪದವಿಪೂರ್ವ ಕಾಲೇಜು ಮುಂಭಾಗದ ರಸ್ತೆ, ಶಿವನಗರ, ಹೌಸಿಂಗ್ ಬೋರ್ಡ್ ಕಾಲೊನಿ, ನೆಹರೂ ಸ್ಟೇಡಿಯಂ ಹತ್ತಿರ, ಚಿದ್ರಿ ಸೇರಿ ವಿವಿಧೆಡೆ ರಸ್ತೆಯಲ್ಲಿ ನೀರು ಸಂಗ್ರಹಗೊಂಡಿತು.