ಬೆಂಗಳೂರು: ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಜಾರಿಯಿಂದ ಜನಸಾಮಾನ್ಯರು ಮತ್ತು ದುಡಿಯುವ ವರ್ಗದ ಮೇಲಾಗುವ ಪರಿಣಾಮಗಳ ಕುರಿತು ಚರ್ಚಿಸಲು ‘ನಾವು ಭಾರತೀಯರು’ ತಂಡವು ಶನಿವಾರ (ಫೆ.15) ಮಧ್ಯಾಹ್ನ 2 ಗಂಟೆಗೆ ಸ್ವಾತಂತ್ರ್ಯ ಉದ್ಯಾನದಲ್ಲಿ ಸಾರ್ವಜನಿಕ ಸಭೆ ಆಯೋಜಿಸಿದೆ.
ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಂಡದ ಮುಖ್ಯಸ್ಥ ಫ್ರಾನ್ಸಿಸ್ ಮಾತನಾಡಿ, ‘ಶಾಸಕ ಜಿಗ್ನೇಶ್ ಮೇವಾನಿ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಪಾಲ್ಗೊಳ್ಳಲಿದ್ದಾರೆ’ ಎಂದರು.