<p><strong>ಶ್ರೀಮಂಡಲ್(ಜನವಾಡ):</strong> ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಶಾಲಾ ಸುತ್ತುಗೋಡೆ, ಆಟದ ಮೈದಾನ, ಶೌಚಾಲಯ ಸೇರಿದಂತೆ ವಿವಿಧ ಮೂಲಸೌಕರ್ಯ ಕಾಮಗಾರಿಗಳನ್ನೂ ಕೈಗೊಳ್ಳಬಹುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ್ ಬದೋಲೆ ಹೇಳಿದರು.</p>.<p>ಬೀದರ್ ತಾಲ್ಲೂಕಿನ ಶ್ರೀಮಂಡಲ್ ಗ್ರಾಮದಲ್ಲಿ ಶುಕ್ರವಾರ ನಡೆದ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಂಬಂಧಿಸಿದ ಅಧಿಕಾರಿಗಳು ಮಕ್ಕಳ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರ ಕಲ್ಪಿಸಬೇಕು. ಮಕ್ಕಳ ಹಕ್ಕಳ ರಕ್ಷಣೆಯಲ್ಲಿ ಸರ್ಕಾರದ ಜತೆಗೆ ಸಮುದಾಯದ ಪಾತ್ರವೂ ಬಹಳ ಮಹತ್ವದ್ದಾಗಿದೆ ಎಂದು ಹೇಳಿದರು.</p>.<p>ಮಕ್ಕಳ ಹಕ್ಕುಗಳ ಜಾಗೃತಿಗೆ ಮಕ್ಕಳ ಗ್ರಾಮಸಭೆ ಹಮ್ಮಿಕೊಳ್ಳಲಾಗಿದೆ. ಸಭೆಯಲ್ಲಿ ಪ್ರಸ್ತಾಪವಾಗುವ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಾಣಿಕರಾವ್ ಪಾಟೀಲ ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ನರೇಗಾ ಸಹಾಯಕ ನಿರ್ದೇಶಕ ಸುದೇಶ್ ಕೊಡ್ಡೆ, ಗ್ರಾಮ ಪಮಚಾಯಿತಿ ಅಧ್ಯಕ್ಷ ವಿ. ಮಂಜುನಾಥ, ಪಿಡಿಒ ಶರತಕುಮಾರ ಅಭಿಮಾನ್ ಇದ್ದರು.</p>.<p>ಅರಿವು ಗ್ರಂಥಾಲಯ ಉದ್ಘಾಟನೆ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ್ ಬದೋಲೆ ಅವರು ಗ್ರಾಮದಲ್ಲಿ ಅರಿವು ಗ್ರಂಥಾಲಯ ಹಾಗೂ ಪುಸ್ತಕ ಗೂಡನ್ನು ಉದ್ಘಾಟಿಸಿದರು.</p>.<p>ಅಧಿಕಾರಿಗಳು, ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀಮಂಡಲ್(ಜನವಾಡ):</strong> ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಶಾಲಾ ಸುತ್ತುಗೋಡೆ, ಆಟದ ಮೈದಾನ, ಶೌಚಾಲಯ ಸೇರಿದಂತೆ ವಿವಿಧ ಮೂಲಸೌಕರ್ಯ ಕಾಮಗಾರಿಗಳನ್ನೂ ಕೈಗೊಳ್ಳಬಹುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ್ ಬದೋಲೆ ಹೇಳಿದರು.</p>.<p>ಬೀದರ್ ತಾಲ್ಲೂಕಿನ ಶ್ರೀಮಂಡಲ್ ಗ್ರಾಮದಲ್ಲಿ ಶುಕ್ರವಾರ ನಡೆದ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಂಬಂಧಿಸಿದ ಅಧಿಕಾರಿಗಳು ಮಕ್ಕಳ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರ ಕಲ್ಪಿಸಬೇಕು. ಮಕ್ಕಳ ಹಕ್ಕಳ ರಕ್ಷಣೆಯಲ್ಲಿ ಸರ್ಕಾರದ ಜತೆಗೆ ಸಮುದಾಯದ ಪಾತ್ರವೂ ಬಹಳ ಮಹತ್ವದ್ದಾಗಿದೆ ಎಂದು ಹೇಳಿದರು.</p>.<p>ಮಕ್ಕಳ ಹಕ್ಕುಗಳ ಜಾಗೃತಿಗೆ ಮಕ್ಕಳ ಗ್ರಾಮಸಭೆ ಹಮ್ಮಿಕೊಳ್ಳಲಾಗಿದೆ. ಸಭೆಯಲ್ಲಿ ಪ್ರಸ್ತಾಪವಾಗುವ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಾಣಿಕರಾವ್ ಪಾಟೀಲ ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ನರೇಗಾ ಸಹಾಯಕ ನಿರ್ದೇಶಕ ಸುದೇಶ್ ಕೊಡ್ಡೆ, ಗ್ರಾಮ ಪಮಚಾಯಿತಿ ಅಧ್ಯಕ್ಷ ವಿ. ಮಂಜುನಾಥ, ಪಿಡಿಒ ಶರತಕುಮಾರ ಅಭಿಮಾನ್ ಇದ್ದರು.</p>.<p>ಅರಿವು ಗ್ರಂಥಾಲಯ ಉದ್ಘಾಟನೆ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ್ ಬದೋಲೆ ಅವರು ಗ್ರಾಮದಲ್ಲಿ ಅರಿವು ಗ್ರಂಥಾಲಯ ಹಾಗೂ ಪುಸ್ತಕ ಗೂಡನ್ನು ಉದ್ಘಾಟಿಸಿದರು.</p>.<p>ಅಧಿಕಾರಿಗಳು, ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>