<p><strong>ಔರಾದ್:</strong> ‘ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆ ಹಾಗೂ ದೇಶ ಸೇವೆ ಮನೋಭಾವನೆ ಬರಲು ರಾಷ್ಟ್ರೀಯ ಸೇವಾ ಯೋಜನೆಯಂತಹ ಶಿಬಿರಗಳು ಪೂರಕವಾಗಲಿವೆ’ ಎಂದು ಪ್ರಾಂಶುಪಾಲೆ ಅಂಬಿಕಾದೇವಿ ಕೊತಮೀರ್ ಹೇಳಿದರು.</p>.<p>ತಾಲ್ಲೂಕಿನ ಗಣೇಶಪೂರ ಗ್ರಾಮದಲ್ಲಿ ಶನಿವಾರ ಸರ್ಕಾರಿ ಪದವಿ ಕಾಲೇಜು ಎನ್ಎಸ್ಎಸ್ ಶಿಬಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಭಾರತ ಸಮನ್ವಯ ನಾಡಾಗಿದೆ. ಶಾಂತಿ, ಸಹಬಾಳ್ವೆ, ಸಹೋದರತೆ ಬಯಸುವ ದೇಶ. ದೇಶದ ಹಿತವೇ ನಮ್ಮ ಹಿತ. ಈ ಭಾವನೆ ಪ್ರತಿಯೊಬ್ಬ ಭಾರತೀಯನಲ್ಲಿ ಬರಬೇಕು. ಯುವಕರು ವೈಯಕ್ತಿಕ ಬೆಳವಣಿಗೆ ಜತೆಗೆ ದೇಶದ ಬೆಳವಣಿಗೆಯಲ್ಲೂ ಒಂದಿಷ್ಟು ಕೊಡುಗೆ ನೀಡಬೇಕು’ ಎಂದು ಸಲಹೆ ನೀಡಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯ ಜ್ಞಾನೇಶ್ವರ ಶಿಬಿರ ಉದ್ಘಾಟಿಸಿ,‘ಗ್ರಾಮೀಣ ಭಾಗದಲ್ಲಿ ಇಂದಿಗೂ ಪರಸ್ಪರ ಸಹೋದರ ಭಾವ ಬಲವಾಗಿದೆ. ಭಾರತೀಯ ಮೌಲ್ಯಯುತ ಸಂಸ್ಕೃತಿ ಇದಕ್ಕೆ ಪೂರಕ’ ಎಂದು ಹೇಳಿದರು.</p>.<p>ಶಿಬಿರದ ಸಂಯೋಜಕ ವಿನಾಯಕ ಮಾತನಾಡಿ,‘ವಿದ್ಯಾರ್ಥಿಗಳಲ್ಲಿ ಶ್ರಮ ಸಂಸ್ಕೃತಿ ಹಾಗೂ ನಾಯಕತ್ವ ಗುಣ ಬೆಳೆಸುವ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಇಂತಹ ಶಿಬಿರ ಆಯೋಜಿಲಾಗುತ್ತದೆ’ ಎಂದರು.</p>.<p>ಉಪನ್ಯಾಸಕ ರಾಮಣ್ಣ ಉಪ್ಪಾರ,‘ವಿದ್ಯಾರ್ಥಿಗಳು ಸಹನೆ, ಸಮಯ ಪ್ರಜ್ಞೆ, ಆತ್ಮ ವಿಶ್ವಾಸ, ಪರಿಶ್ರಮದಂತಹ ಮೌಲ್ಯಗಳು ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಉಪನ್ಯಾಸಕ ಸಂಜುಕುಮಾರ ತಾಂದಳೆ, ಸುನೀಲ ಮಾಳಗೆ, ದಯಾನಂದ ಬಾವುಗೆ ವಿದ್ಯಾರ್ಥಿಗಳು, ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್:</strong> ‘ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆ ಹಾಗೂ ದೇಶ ಸೇವೆ ಮನೋಭಾವನೆ ಬರಲು ರಾಷ್ಟ್ರೀಯ ಸೇವಾ ಯೋಜನೆಯಂತಹ ಶಿಬಿರಗಳು ಪೂರಕವಾಗಲಿವೆ’ ಎಂದು ಪ್ರಾಂಶುಪಾಲೆ ಅಂಬಿಕಾದೇವಿ ಕೊತಮೀರ್ ಹೇಳಿದರು.</p>.<p>ತಾಲ್ಲೂಕಿನ ಗಣೇಶಪೂರ ಗ್ರಾಮದಲ್ಲಿ ಶನಿವಾರ ಸರ್ಕಾರಿ ಪದವಿ ಕಾಲೇಜು ಎನ್ಎಸ್ಎಸ್ ಶಿಬಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಭಾರತ ಸಮನ್ವಯ ನಾಡಾಗಿದೆ. ಶಾಂತಿ, ಸಹಬಾಳ್ವೆ, ಸಹೋದರತೆ ಬಯಸುವ ದೇಶ. ದೇಶದ ಹಿತವೇ ನಮ್ಮ ಹಿತ. ಈ ಭಾವನೆ ಪ್ರತಿಯೊಬ್ಬ ಭಾರತೀಯನಲ್ಲಿ ಬರಬೇಕು. ಯುವಕರು ವೈಯಕ್ತಿಕ ಬೆಳವಣಿಗೆ ಜತೆಗೆ ದೇಶದ ಬೆಳವಣಿಗೆಯಲ್ಲೂ ಒಂದಿಷ್ಟು ಕೊಡುಗೆ ನೀಡಬೇಕು’ ಎಂದು ಸಲಹೆ ನೀಡಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯ ಜ್ಞಾನೇಶ್ವರ ಶಿಬಿರ ಉದ್ಘಾಟಿಸಿ,‘ಗ್ರಾಮೀಣ ಭಾಗದಲ್ಲಿ ಇಂದಿಗೂ ಪರಸ್ಪರ ಸಹೋದರ ಭಾವ ಬಲವಾಗಿದೆ. ಭಾರತೀಯ ಮೌಲ್ಯಯುತ ಸಂಸ್ಕೃತಿ ಇದಕ್ಕೆ ಪೂರಕ’ ಎಂದು ಹೇಳಿದರು.</p>.<p>ಶಿಬಿರದ ಸಂಯೋಜಕ ವಿನಾಯಕ ಮಾತನಾಡಿ,‘ವಿದ್ಯಾರ್ಥಿಗಳಲ್ಲಿ ಶ್ರಮ ಸಂಸ್ಕೃತಿ ಹಾಗೂ ನಾಯಕತ್ವ ಗುಣ ಬೆಳೆಸುವ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಇಂತಹ ಶಿಬಿರ ಆಯೋಜಿಲಾಗುತ್ತದೆ’ ಎಂದರು.</p>.<p>ಉಪನ್ಯಾಸಕ ರಾಮಣ್ಣ ಉಪ್ಪಾರ,‘ವಿದ್ಯಾರ್ಥಿಗಳು ಸಹನೆ, ಸಮಯ ಪ್ರಜ್ಞೆ, ಆತ್ಮ ವಿಶ್ವಾಸ, ಪರಿಶ್ರಮದಂತಹ ಮೌಲ್ಯಗಳು ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಉಪನ್ಯಾಸಕ ಸಂಜುಕುಮಾರ ತಾಂದಳೆ, ಸುನೀಲ ಮಾಳಗೆ, ದಯಾನಂದ ಬಾವುಗೆ ವಿದ್ಯಾರ್ಥಿಗಳು, ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>