<p><strong>ಬೀದರ್:</strong> ಇಲ್ಲಿನ ಸಿದ್ಧಾರ್ಥ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಸಕ್ತ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರ ನಗರದ ಪಾಪನಾಶ ದೇವಸ್ಥಾನದಲ್ಲಿ ಮಂಗಳವಾರ ಆರಂಭಗೊಂಡಿತು.</p>.<p>ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಸಿ.ಎಂ.ಶಹಾಬಾದಕರ್ ಉದ್ಘಾಟಿಸಿ, ವಿದ್ಯಾರ್ಥಿಗಳು ಹೆಚ್ಚಾಗಿ ಮೊಬೈಲ್ ಬಳಸುತ್ತಿದ್ದಾರೆ. ಅದು ಕಡಿಮೆಯಾಗಬೇಕು. ಇಂತಹ ಶಿಬಿರಗಳಲ್ಲಿ ಭಾಗವಹಿಸಿ ಉನ್ನತವಾದ ಮೌಲ್ಯ ಬೆಳೆಸಿಕೊಂಡು ಜೀವನ ನಡೆಸಲು ಸಲಹೆ, ಮಾರ್ಗದರ್ಶನ ಪಡೆಯಬೇಕು ಎಂದರು.</p>.<p>ಹನುಮಾನ ಮಂದಿರ ದೇವಸ್ಥಾನದ ಅಧ್ಯಕ್ಷ ಅಶೋಕ ಪಾಟೀಲ, ಪ್ರಮುಖರಾದ ವಿಜಯಕುಮಾರ ಗುನಳ್ಳಿಕರ ಮಾತನಾಡಿ, ಇಂತಹ ಶಿಬಿರಗಳಿಂದ ಮಕ್ಕಳ ವ್ಯಕ್ತಿತ್ವ ವಿಕಸನವಾಗುತ್ತದೆ. ಭವಿಷ್ಯಕ್ಕೆ ಭದ್ರ ಅಡಿಪಾಯ ಸಿಗುತ್ತದೆ ಎಂದು ತಿಳಿಸಿದರು.</p>.<p>ಪ್ರಾಚಾರ್ಯ ಎಸ್.ಪ್ರಭು ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿ ಸ್ವಚ್ಛತೆ, ಸಹಬಾಳ್ವೆ ಮತ್ತು ಸಹೋದರ ಮನೋಭಾವ ಬೆಳೆಸಿಕೊಳ್ಳಬೇಕು. ಯಾವುದೇ ರಾಷ್ಟ್ರ ಅಭಿವೃದ್ಧಿ ಆಗಬೇಕಾದರೆ ಆ ರಾಷ್ಟ್ರದ ವಿದ್ಯಾರ್ಥಿಗಳಿಂದ ಸಾಧ್ಯ ಎಂದು ಹೇಳಿದರು.</p>.<p>ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ನಸಿರೊದ್ದೀನ್, ಉಪನ್ಯಾಸಕರಾದ ಸುಲೋಚನಾ ಬಿರಾದಾರ, ಏಕನಾಥ ಸುಣಗಾರ, ಕೈಲಾಶಪತಿ, ನಾಗಗೊಂಡ, ನಾಗಪ್ಪ, ಲಕ್ಷ್ಮಿ, ಅಕೀಬ್ ಜಾವೇದ್, ಚಂದ್ರಕಾಂತ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಇಲ್ಲಿನ ಸಿದ್ಧಾರ್ಥ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಸಕ್ತ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರ ನಗರದ ಪಾಪನಾಶ ದೇವಸ್ಥಾನದಲ್ಲಿ ಮಂಗಳವಾರ ಆರಂಭಗೊಂಡಿತು.</p>.<p>ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಸಿ.ಎಂ.ಶಹಾಬಾದಕರ್ ಉದ್ಘಾಟಿಸಿ, ವಿದ್ಯಾರ್ಥಿಗಳು ಹೆಚ್ಚಾಗಿ ಮೊಬೈಲ್ ಬಳಸುತ್ತಿದ್ದಾರೆ. ಅದು ಕಡಿಮೆಯಾಗಬೇಕು. ಇಂತಹ ಶಿಬಿರಗಳಲ್ಲಿ ಭಾಗವಹಿಸಿ ಉನ್ನತವಾದ ಮೌಲ್ಯ ಬೆಳೆಸಿಕೊಂಡು ಜೀವನ ನಡೆಸಲು ಸಲಹೆ, ಮಾರ್ಗದರ್ಶನ ಪಡೆಯಬೇಕು ಎಂದರು.</p>.<p>ಹನುಮಾನ ಮಂದಿರ ದೇವಸ್ಥಾನದ ಅಧ್ಯಕ್ಷ ಅಶೋಕ ಪಾಟೀಲ, ಪ್ರಮುಖರಾದ ವಿಜಯಕುಮಾರ ಗುನಳ್ಳಿಕರ ಮಾತನಾಡಿ, ಇಂತಹ ಶಿಬಿರಗಳಿಂದ ಮಕ್ಕಳ ವ್ಯಕ್ತಿತ್ವ ವಿಕಸನವಾಗುತ್ತದೆ. ಭವಿಷ್ಯಕ್ಕೆ ಭದ್ರ ಅಡಿಪಾಯ ಸಿಗುತ್ತದೆ ಎಂದು ತಿಳಿಸಿದರು.</p>.<p>ಪ್ರಾಚಾರ್ಯ ಎಸ್.ಪ್ರಭು ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿ ಸ್ವಚ್ಛತೆ, ಸಹಬಾಳ್ವೆ ಮತ್ತು ಸಹೋದರ ಮನೋಭಾವ ಬೆಳೆಸಿಕೊಳ್ಳಬೇಕು. ಯಾವುದೇ ರಾಷ್ಟ್ರ ಅಭಿವೃದ್ಧಿ ಆಗಬೇಕಾದರೆ ಆ ರಾಷ್ಟ್ರದ ವಿದ್ಯಾರ್ಥಿಗಳಿಂದ ಸಾಧ್ಯ ಎಂದು ಹೇಳಿದರು.</p>.<p>ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ನಸಿರೊದ್ದೀನ್, ಉಪನ್ಯಾಸಕರಾದ ಸುಲೋಚನಾ ಬಿರಾದಾರ, ಏಕನಾಥ ಸುಣಗಾರ, ಕೈಲಾಶಪತಿ, ನಾಗಗೊಂಡ, ನಾಗಪ್ಪ, ಲಕ್ಷ್ಮಿ, ಅಕೀಬ್ ಜಾವೇದ್, ಚಂದ್ರಕಾಂತ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>