<p><strong>ಬೀದರ್</strong>: ನಗರದ ಸಿದ್ಧಾರ್ಥ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಸಕ್ತ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರಕ್ಕೆ ಇಲ್ಲಿನ ಅಲಿಯಾಬಾದ್ನಲ್ಲಿ (ಜೆ) ಗುರುವಾರ ಚಾಲನೆ ನೀಡಲಾಯಿತು.</p>.<p>ಅಬಕಾರಿ ಇಲಾಖೆಯ ಜಿಲ್ಲಾಧಿಕಾರಿ ರವಿಶಂಕರ್ ಉದ್ಘಾಟಿಸಿ, ಮದ್ಯಪಾನ ಆರೋಗ್ಯಕ್ಕೆ ಒಳ್ಳೆಯದಲ್ಲ. ಯಾರೂ ಕೂಡ ದುಶ್ಚಟಗಳಿಗೆ ಒಳಗಾಗಬಾರದು ಎಂದು ಹೇಳಿದರು.</p>.<p>ನಿಟ್ಟೂರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಬಾಲಾಜಿ ವಾಡೇಕರ್ ಮಾತನಾಡಿ, ‘ಎನ್.ಎಸ್.ಎಸ್ ನಿಂದ ಸಮಾಜ ಸೇವೆಯ ಜತೆ ಮಾನವಿಯ ಮೌಲ್ಯಗಳು ಬೆಳೆಯುತ್ತದೆ. ತಂದೆ ತಾಯಿಯನ್ನು ಯಾವ ರೀತಿಯಾಗಿ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಉನ್ನತ ಮೌಲ್ಯಗಳ ಮಹತ್ವ ಗೊತ್ತಾಗುತ್ತದೆ’ ಎಂದು ತಿಳಿಸಿದರು.</p>.<p>ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ರಾಜಶೇಖರ ಮಂಗಲಗಿ, ಎನ್.ಎಸ್.ಎಸ್ನಿಂದ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ. ಸಮಾಜ ಸೇವೆ ಗುಣ ಬೆಳೆಯುತ್ತದೆ ಎಂದು ಹೇಳಿದರು.</p>.<p>ಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್. ಪ್ರಭು ಮಾತನಾಡಿ, ಇಂದಿನ ಯುವಕರೇ ನಾಳೆಯ ಪ್ರಜೆಗಳು. ಸಮಯಕ್ಕೆ ಪ್ರತಿಯೊಬ್ಬರೂ ಮಹತ್ವ ಕೊಟ್ಟು ಅದರಂತೆ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.</p>.<p>ಉಪನ್ಯಾಸಕ ಏಕನಾಥ, ಕಾರ್ಯಕ್ರಮದ ಸಂಯೋಜನಾಧಿಕಾರಿ ನಸಿರೊದ್ದೀನ್, ಸುಲೋಚನಾ ಬಿರಾದಾರ, ಪ್ರಿಯಾಂಕಾ, ನಾಗಗೊಂಡ, ನಾಗಪ್ಪ, ಶೇಕ್ ಅಕೀಬ್ ಜಾವೇದ್, ಮಂಜುಳಾ ಮತ್ತು ರೇಖಾ ಹಾಜರಿದ್ದರು. ಎನ್.ಎಸ್.ಎಸ್. ಗೀತೆಯನ್ನು ರೀಟಾ ಮತ್ತು ಸಂಗಡಿಗರು ಹಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ನಗರದ ಸಿದ್ಧಾರ್ಥ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಸಕ್ತ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರಕ್ಕೆ ಇಲ್ಲಿನ ಅಲಿಯಾಬಾದ್ನಲ್ಲಿ (ಜೆ) ಗುರುವಾರ ಚಾಲನೆ ನೀಡಲಾಯಿತು.</p>.<p>ಅಬಕಾರಿ ಇಲಾಖೆಯ ಜಿಲ್ಲಾಧಿಕಾರಿ ರವಿಶಂಕರ್ ಉದ್ಘಾಟಿಸಿ, ಮದ್ಯಪಾನ ಆರೋಗ್ಯಕ್ಕೆ ಒಳ್ಳೆಯದಲ್ಲ. ಯಾರೂ ಕೂಡ ದುಶ್ಚಟಗಳಿಗೆ ಒಳಗಾಗಬಾರದು ಎಂದು ಹೇಳಿದರು.</p>.<p>ನಿಟ್ಟೂರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಬಾಲಾಜಿ ವಾಡೇಕರ್ ಮಾತನಾಡಿ, ‘ಎನ್.ಎಸ್.ಎಸ್ ನಿಂದ ಸಮಾಜ ಸೇವೆಯ ಜತೆ ಮಾನವಿಯ ಮೌಲ್ಯಗಳು ಬೆಳೆಯುತ್ತದೆ. ತಂದೆ ತಾಯಿಯನ್ನು ಯಾವ ರೀತಿಯಾಗಿ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಉನ್ನತ ಮೌಲ್ಯಗಳ ಮಹತ್ವ ಗೊತ್ತಾಗುತ್ತದೆ’ ಎಂದು ತಿಳಿಸಿದರು.</p>.<p>ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ರಾಜಶೇಖರ ಮಂಗಲಗಿ, ಎನ್.ಎಸ್.ಎಸ್ನಿಂದ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ. ಸಮಾಜ ಸೇವೆ ಗುಣ ಬೆಳೆಯುತ್ತದೆ ಎಂದು ಹೇಳಿದರು.</p>.<p>ಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್. ಪ್ರಭು ಮಾತನಾಡಿ, ಇಂದಿನ ಯುವಕರೇ ನಾಳೆಯ ಪ್ರಜೆಗಳು. ಸಮಯಕ್ಕೆ ಪ್ರತಿಯೊಬ್ಬರೂ ಮಹತ್ವ ಕೊಟ್ಟು ಅದರಂತೆ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.</p>.<p>ಉಪನ್ಯಾಸಕ ಏಕನಾಥ, ಕಾರ್ಯಕ್ರಮದ ಸಂಯೋಜನಾಧಿಕಾರಿ ನಸಿರೊದ್ದೀನ್, ಸುಲೋಚನಾ ಬಿರಾದಾರ, ಪ್ರಿಯಾಂಕಾ, ನಾಗಗೊಂಡ, ನಾಗಪ್ಪ, ಶೇಕ್ ಅಕೀಬ್ ಜಾವೇದ್, ಮಂಜುಳಾ ಮತ್ತು ರೇಖಾ ಹಾಜರಿದ್ದರು. ಎನ್.ಎಸ್.ಎಸ್. ಗೀತೆಯನ್ನು ರೀಟಾ ಮತ್ತು ಸಂಗಡಿಗರು ಹಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>