ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅ.20ಕ್ಕೆ ಎನ್‍ಎಸ್‍ಎಸ್‍ಕೆ ಚುನಾವಣೆ

Last Updated 21 ಸೆಪ್ಟೆಂಬರ್ 2020, 16:14 IST
ಅಕ್ಷರ ಗಾತ್ರ

ಜನವಾಡ: ಬೀದರ್ ತಾಲ್ಲೂಕಿನ ಜನವಾಡ ಸಮೀಪದ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಚುನಾವಣೆ ಅಕ್ಟೋಬರ್ 20 ರಂದು ನಡೆಯಲಿದೆ.

ಏಪ್ರಿಲ್ 25 ರಂದು ನಿಗದಿಪಡಿಸಿದ್ದ ಚುನಾವಣೆಯನ್ನು ಕೊರೊನಾ ಸೋಂಕಿನ ಕಾರಣ ಮುಂದೂಡಲಾಗಿತ್ತು. ಇದೀಗ ಸಹಕಾರ ಚುನಾವಣಾ ಆಯೋಗವು ಜುಲೈ 13ಕ್ಕೆ ಚುನಾವಣೆ ಪ್ರಕ್ರಿಯೆ ಯಾವ ಹಂತದಲ್ಲಿ ನಿಂತಿತ್ತೋ ಅಲ್ಲಿಂದ 20 ರಿಂದ 45 ದಿನಗಳ ಒಳಗೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳಿಸಲು ಆದೇಶಿಸಿದೆ. ಈ ಪ್ರಯುಕ್ತ ಅಕ್ಟೋಬರ್ 20 ರಂದು ಚುನಾವಣೆ ನಡೆಸುವಂತೆ ಚುನಾವಣಾಧಿಕಾರಿಯನ್ನು ಕೋರಲು ನಿರ್ಧರಿಸಲಾಗಿದೆ ಎಂದು ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ತಿಳಿಸಿದ್ದಾರೆ.

ಚುನಾವಣೆಯಲ್ಲಿ ಮತದಾನದ ಅರ್ಹತೆ ಪಡೆಯಲು ಸುಸ್ತಿದಾರ ಸದಸ್ಯರು ಸೆಪ್ಟೆಂಬರ್ 27ರ ಒಳಗೆ ಕಾರ್ಖಾನೆಯ ಆಡಳಿತ ಕಚೇರಿಯಲ್ಲಿ ಬಾಕಿ ಮೊತ್ತವನ್ನು ಪಾವತಿಸಬೇಕು ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT