ಬೀದರ್: ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯಲ್ಲಿ ಸಾಂಖ್ಯಿಕ ತಜ್ಞ ಪ್ರೊ.ಪಿ.ಸಿ.ಮಹಾಲನೋಬಿಸ್ ಜನ್ಮ ದಿನ ಆಚರಿಸಲಾಯಿತು.
‘ವೃದ್ಧರ ಯೋಗ ಕ್ಷೇಮಕ್ಕೆ ಆದ್ಯತೆ ನೀಡಬೇಕು. ಲಿಂಗ ಸಮಾನತೆಯನ್ನು ಸಾಧಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಶಕ್ತರನ್ನಾಗಿ ಮಾಡಬೇಕು’ ಎಂದು ಪ್ರೊ.ಡಿ.ಬಿ.ಕುಂಬಾರ ತಿಳಿಸಿದರು.
ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಅಶೋಕ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾ ಅಧಿಕಾರಿ ಶರಣಯ್ಯ ಮಠಪತಿ, ಅಧಿಕಾರಿಗಳಾದ ಸುವರ್ಣ, ಲಕ್ಷ್ಮಿಕಾಂತ, ರಮೇಶ ಸುಂಬದ, ಶ್ರವಣ ಜಾಧವ್ ಇದ್ದರು.