‘ಸಚಿವ ಪ್ರಭು ಚವಾಣ್ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೋವಿಡ್ ಹೋಗಲಾಡಿಸಲು ಪ್ರಯತ್ನ ನಡೆಸಿದ್ದಾರೆ. ಕೋವಿಡ್ಗೆ ಹೆದರಿ ಮನೆಯಲ್ಲಿ ಕುಳಿತವರಲ್ಲ. ಎಲ್ಲ ತಾಲ್ಲೂಕುಗಳಲ್ಲಿ ಸುತ್ತಾಡಿ ಜನರಲ್ಲಿ ಧೈರ್ಯ, ವೈದ್ಯರಲ್ಲಿ ಉತ್ಸಾಹ ತುಂಬಿ ಕೆಲಸ ಮಾಡಿಸಿಕೊಳ್ಳುವ ಕ್ರಿಯಾಶೀಲ ಸಚಿವರನ್ನು ಉಸ್ತುವಾರಿಯಿಂದ ಕೈಬಿಟ್ಟಿದ್ದು ಸರಿಯಲ್ಲ’ ಎಂದು ಅವರು ಹೇಳಿದ್ದಾರೆ.