<p><strong>ಚಿಟಗುಪ್ಪ: </strong>ಮನ್ನಾಎಖ್ಖೇಳಿ ಗ್ರಾಮದಿಂದ ಬೋರಾಳ ಮಾರ್ಗವಾಗಿ ಚಿಂಚೋಳಿ ವರೆಗೆ ನಿತ್ಯ ಬಸ್ ಸಂಚಾರ ಆರಂಭಿಸಲು ಅನುಮತಿ ನೀಡಲಾಗಿದೆ ಎಂದು ತಹಶೀಲ್ದಾರ್ ರವೀಂದ್ರ ದಾಮಾ ಹೇಳಿದರು.</p>.<p>ತಾಲ್ಲೂಕಿನ ಬೊರಾಳ ಗ್ರಾಮದಲ್ಲಿ ಶನಿವಾರ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಗ್ರಾಮಗಳಲ್ಲಿ ಚರಂಡಿ ಸ್ವಚ್ಛತೆ, ಶುದ್ಧ ಕುಡಿಯುವ ನೀರು ಪೂರೈಕೆ, ಬೀದಿ ದೀಪಗಳ ನಿರ್ವಹಣೆಯತ್ತ ಕಾಳಜಿ ವಹಿಸಬೇಕು. ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದರು.</p>.<p>ವಿದ್ಯುತ್ ತಂತಿಗಳು ಮನೆ ಮೇಲ್ಛಾವಣಿ, ತೋಟಗಳಲ್ಲಿನ ಬೆಳೆಗಳಿಗೆ ತಗುಲುವಂತೆ ಜೋತು ಬಿದ್ದಿವೆ, ಜೆಸ್ಕಾಂ ಇಲಾಖೆಯ ಅಧಿಕಾರಿಗಳು ಈ ಸಮಸ್ಯೆ ಪರಿಹರಿಸಲು ಮುಂದಾಗಬೇಕು ಎಂದು ಸೂಚಿಸಿದರು.</p>.<p>ಒಟ್ಟು 18 ವಿವಿಧ ಇಲಾಖೆಯ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸ ದಂತೆ ಅರ್ಜಿಗಳು ಸಲ್ಲಿಕೆಯಾಗಿದ್ದು,</p>.<p>ಕಂದಾಯ ಇಲಾಖೆಯ ಸಿ-ಫಾರ್ಮ್ನ 3, ಚರಂಡಿ ಸಮಸ್ಯೆಯ 3, ಕೆಇಬಿಯ 1, ವಿಧವಾ, ಸಂಧ್ಯಾ ಸುರಕ್ಷಾ ವೇತನದ 5, ಇತರ ವಿಷಯಗಳ ಸಂಬಂಧ 6 ಅರ್ಜಿಗಳು ಸೇರಿ 18 ಅರ್ಜಿಗಳು ಸಲ್ಲಿಕೆಯಾದವು. ಈ ಪೈಕಿ 5 ಅರ್ಜಿಗಳನ್ನು ಸ್ಥಳದಲ್ಲಿ ವಿಲೇವಾರಿ ಮಾಡಲಾಯಿತು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣ ಅಧಿಕಾರಿ ವೆಂಕಟ ಸಿಂಧೆ, ಗ್ರಾ.ಪಂ ಅಧ್ಯಕ್ಷ ನಾಗಪ್ಪ ಅರ್ಕಿ, ಉಪಾಧ್ಯಕ್ಷೆ ಸುವರ್ಣ, ಗ್ರಾಂ.ಪಂ ಸದಸ್ಯ ಸಂತೋಷ, ಕಾಶಿನಾಥ ಪವಾರ್ ವಿವಿಧ ಇಲಾಖೆಯ ಅಧಿಕಾರಿಗಳು<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಟಗುಪ್ಪ: </strong>ಮನ್ನಾಎಖ್ಖೇಳಿ ಗ್ರಾಮದಿಂದ ಬೋರಾಳ ಮಾರ್ಗವಾಗಿ ಚಿಂಚೋಳಿ ವರೆಗೆ ನಿತ್ಯ ಬಸ್ ಸಂಚಾರ ಆರಂಭಿಸಲು ಅನುಮತಿ ನೀಡಲಾಗಿದೆ ಎಂದು ತಹಶೀಲ್ದಾರ್ ರವೀಂದ್ರ ದಾಮಾ ಹೇಳಿದರು.</p>.<p>ತಾಲ್ಲೂಕಿನ ಬೊರಾಳ ಗ್ರಾಮದಲ್ಲಿ ಶನಿವಾರ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಗ್ರಾಮಗಳಲ್ಲಿ ಚರಂಡಿ ಸ್ವಚ್ಛತೆ, ಶುದ್ಧ ಕುಡಿಯುವ ನೀರು ಪೂರೈಕೆ, ಬೀದಿ ದೀಪಗಳ ನಿರ್ವಹಣೆಯತ್ತ ಕಾಳಜಿ ವಹಿಸಬೇಕು. ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದರು.</p>.<p>ವಿದ್ಯುತ್ ತಂತಿಗಳು ಮನೆ ಮೇಲ್ಛಾವಣಿ, ತೋಟಗಳಲ್ಲಿನ ಬೆಳೆಗಳಿಗೆ ತಗುಲುವಂತೆ ಜೋತು ಬಿದ್ದಿವೆ, ಜೆಸ್ಕಾಂ ಇಲಾಖೆಯ ಅಧಿಕಾರಿಗಳು ಈ ಸಮಸ್ಯೆ ಪರಿಹರಿಸಲು ಮುಂದಾಗಬೇಕು ಎಂದು ಸೂಚಿಸಿದರು.</p>.<p>ಒಟ್ಟು 18 ವಿವಿಧ ಇಲಾಖೆಯ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸ ದಂತೆ ಅರ್ಜಿಗಳು ಸಲ್ಲಿಕೆಯಾಗಿದ್ದು,</p>.<p>ಕಂದಾಯ ಇಲಾಖೆಯ ಸಿ-ಫಾರ್ಮ್ನ 3, ಚರಂಡಿ ಸಮಸ್ಯೆಯ 3, ಕೆಇಬಿಯ 1, ವಿಧವಾ, ಸಂಧ್ಯಾ ಸುರಕ್ಷಾ ವೇತನದ 5, ಇತರ ವಿಷಯಗಳ ಸಂಬಂಧ 6 ಅರ್ಜಿಗಳು ಸೇರಿ 18 ಅರ್ಜಿಗಳು ಸಲ್ಲಿಕೆಯಾದವು. ಈ ಪೈಕಿ 5 ಅರ್ಜಿಗಳನ್ನು ಸ್ಥಳದಲ್ಲಿ ವಿಲೇವಾರಿ ಮಾಡಲಾಯಿತು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣ ಅಧಿಕಾರಿ ವೆಂಕಟ ಸಿಂಧೆ, ಗ್ರಾ.ಪಂ ಅಧ್ಯಕ್ಷ ನಾಗಪ್ಪ ಅರ್ಕಿ, ಉಪಾಧ್ಯಕ್ಷೆ ಸುವರ್ಣ, ಗ್ರಾಂ.ಪಂ ಸದಸ್ಯ ಸಂತೋಷ, ಕಾಶಿನಾಥ ಪವಾರ್ ವಿವಿಧ ಇಲಾಖೆಯ ಅಧಿಕಾರಿಗಳು<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>