ಭಾಲ್ಕಿ: ತಾಲ್ಲೂಕಿನ ತೇಗಂಪೂರ ಗ್ರಾಮದ ಕೆರೆಯಲ್ಲಿನ ತೆರೆದ ಬಾವಿಗೆ ಮಂಗಳವಾರ ಪಂಚಾಯತ್ ರಾಜ್ ಇಲಾಖೆ ಎಇಇ ಅಶೋಕ ಕಾಳಗಿ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ನೀರು ಶುದ್ಧೀಕರಣ ಘಟಕ ಸ್ಥಾಪನೆಗೆ ಸ್ಥಳ ಪರಿಶೀಲನೆ ನಡೆಸಿ, ಪೂಜೆ ಸಲ್ಲಿಸಿದರು.
ತೇಗಂಪೂರ ಗ್ರಾಮದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗುತ್ತಿರುವ ಕುರಿತು ‘ಪ್ರಜಾವಾಣಿ’ಯ ಮೇ 11ರ ಮಂಗಳವಾರದ ಸಂಚಿಕೆಯಲ್ಲಿ ‘ಕುಡಿಯಲು ಯೋಗ್ಯವಲ್ಲದ ಕೆರೆಯ ಬಾವಿ ನೀರು’ ಶೀರ್ಷಿಕೆ ಅಡಿಯಲ್ಲಿ ಸಮಸ್ಯೆಯ ವಿವರವಾದ ವರದಿ ಪ್ರಕಟಿಸಿತ್ತು.
ವರದಿಗೆ ಸ್ಪಂದಿಸಿದ ಅಧಿಕಾರಗಳು ಗ್ರಾಮಕ್ಕೆ ದೌಡಾಯಿಸಿ ಶೀಘ್ರದಲ್ಲಿ ಸಮಸ್ಯೆ ಪರಿಹಾರಕ್ಕೆ ಯತ್ನಿಸುವ ಭರವಸೆ ನೀಡಿದ್ದಾರೆ ಎಂದು ಗ್ರಾಮದ ಪ್ರಮುಖ ಶಿವಕುಮಾರ ತೇಗಂಪೂರ ತಿಳಿಸಿದ್ದಾರೆ.