<p>‘ಕೋವಿಡ್-19 ಮಾರ್ಗಸೂಚಿಯನ್ವಯ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಪಿಆರ್ಒ ಹಾಗೂ ಎಪಿಆರ್ಒ ಇನ್ನಿತರ ಅಧಿಕಾರಿಗಳು ಕಡ್ಡಾಯ ಮಾಸ್ಕಗಳನ್ನು ಧರಿಸಿ, ಸ್ಯಾನಿಟೈಸರ್ ಬಳಸಿ ಕಾರ್ಯ ನಿರ್ವಹಿಸಬೇಕು. ಮತದಾನ ಕೇಂದ್ರಕ್ಕೆ ಬರುವ ಮತದಾರರಿಗೆ ಕಡ್ಡಾಯ ತಪಾಸಣೆ ನಡೆಸಿ ಮತಗಟ್ಟೆಯೊಳಗೆ ಪ್ರವೇಶಿಸುವಂತೆ ನೋಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಸೂಚಿಸಿದರು.</p>.<p>ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳಿಗೆ ನಗರದ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು.</p>.<p>‘ಅಧಿಕಾರಿಗಳು ಮತದಾನ ದಿನದಂದು ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸಬೇಕು ಹಾಗೂ ಮತದಾನ ಕಾರ್ಯವು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಮಾಸ್ಟರ್ ಟ್ರೇನರ್ ಡಾ.ಗೌತಮ ಅರಳಿ ಅವರು ಮತದಾನ ಕೇಂದ್ರದಲ್ಲಿ ನಿರ್ವಹಿಸುವ ಕಾರ್ಯ ವಿಧಾನಗಳ ಬಗ್ಗೆ ಮತಗಟ್ಟೆ ಅಧಿಕಾರಿಗಳಿಗೆ ವಿವರವಾಗಿ ತಿಳಿಸಿದರು.<br /><br />ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿದ್ದ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಬ್ಯಾಲೆಟ್ ಬಾಕ್ಸ್ ನಿರ್ವಹಣೆ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್, ತಹಶೀಲ್ದಾರ್ ಗಂಗಾದೇವಿ, ಮಾಸ್ಟರ್ ಟ್ರೇನರ್ ರಮೇಶ ಮಠಪತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಕೋವಿಡ್-19 ಮಾರ್ಗಸೂಚಿಯನ್ವಯ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಪಿಆರ್ಒ ಹಾಗೂ ಎಪಿಆರ್ಒ ಇನ್ನಿತರ ಅಧಿಕಾರಿಗಳು ಕಡ್ಡಾಯ ಮಾಸ್ಕಗಳನ್ನು ಧರಿಸಿ, ಸ್ಯಾನಿಟೈಸರ್ ಬಳಸಿ ಕಾರ್ಯ ನಿರ್ವಹಿಸಬೇಕು. ಮತದಾನ ಕೇಂದ್ರಕ್ಕೆ ಬರುವ ಮತದಾರರಿಗೆ ಕಡ್ಡಾಯ ತಪಾಸಣೆ ನಡೆಸಿ ಮತಗಟ್ಟೆಯೊಳಗೆ ಪ್ರವೇಶಿಸುವಂತೆ ನೋಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಸೂಚಿಸಿದರು.</p>.<p>ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳಿಗೆ ನಗರದ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು.</p>.<p>‘ಅಧಿಕಾರಿಗಳು ಮತದಾನ ದಿನದಂದು ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸಬೇಕು ಹಾಗೂ ಮತದಾನ ಕಾರ್ಯವು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಮಾಸ್ಟರ್ ಟ್ರೇನರ್ ಡಾ.ಗೌತಮ ಅರಳಿ ಅವರು ಮತದಾನ ಕೇಂದ್ರದಲ್ಲಿ ನಿರ್ವಹಿಸುವ ಕಾರ್ಯ ವಿಧಾನಗಳ ಬಗ್ಗೆ ಮತಗಟ್ಟೆ ಅಧಿಕಾರಿಗಳಿಗೆ ವಿವರವಾಗಿ ತಿಳಿಸಿದರು.<br /><br />ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿದ್ದ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಬ್ಯಾಲೆಟ್ ಬಾಕ್ಸ್ ನಿರ್ವಹಣೆ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್, ತಹಶೀಲ್ದಾರ್ ಗಂಗಾದೇವಿ, ಮಾಸ್ಟರ್ ಟ್ರೇನರ್ ರಮೇಶ ಮಠಪತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>