ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಡಾ.ನಂಜುಂಡಪ್ಪ ವರದಿ ಆಧರಿಸಿ 2005 ರಲ್ಲಿ ಬೀದರ್ನಲ್ಲಿ ಪಶು ವೈದ್ಯಕೀಯ ವಿಶ್ವವಿದ್ಯಾಲಯ ಸ್ಥಾಪಿಸಲಾಗಿದೆ. ಅಗತ್ಯ ಸೌಕರ್ಯ ಕಲ್ಪಿಸಿ, ವಿಶ್ವವಿದ್ಯಾಲಯವನ್ನು ರಾಜ್ಯದ ಉದ್ದಗಲಕ್ಕೂ ವಿಸ್ತರಿಸುವ ಬದಲು ಇನ್ನೊಂದು ವಿಶ್ವವಿದ್ಯಾಲಯ ಸ್ಥಾಪಿಸಿ, ವಿಭಜನೆ ಮಾಡಲು ಹೊರಟಿರುವುದು ನ್ಯಾಯಸಮ್ಮತವಲ್ಲ ಎಂದು ಹೇಳಿದ್ದಾರೆ.