ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘20ರಂದು ಬಂದ್ ಬೇಡ: ಮಾತುಕತೆಗೆ ಬನ್ನಿ’

Last Updated 17 ಸೆಪ್ಟೆಂಬರ್ 2022, 13:20 IST
ಅಕ್ಷರ ಗಾತ್ರ

ಹುಮನಾಬಾದ್: ‘ವೀರಶೈವ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡುವಂತೆ ರಾಜ್ಯದಲ್ಲಿ ಸುಮಾರು 80 ಶಾಸಕರು, ಸಂಸದರು ಪತ್ರ ನೀಡಿದ್ದಾರೆ. ಆದರೆ ಕೇವಲ ಶಾಸಕ ರಾಜಶೇಖರ ಪಾಟೀಲ ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ, ಭೀಮರಾವ್ ಪಾಟೀಲ ಅವರ ವಿರುದ್ಧ ಪ್ರತಿಭಟನೆ ನಡೆಸುವುದು ಸೂಕ್ತ ಅಲ್ಲ’ ಎಂದು ದಲಿತ ಮುಖಂಡ ರಮೇಶ ಡಾಕುಳಗಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ವೀರಶೈವ ಜಂಗಮ ಹಾಗೂ ಬೇಡ ಜಂಗಮರ ಮಧ್ಯೆ ವ್ಯತ್ಯಾಸ ಇದೆ. ವೀರಶೈವ ಜಂಗಮರು ಬೇಡ ಜಗಮರಲ್ಲ. ಅವರನ್ನು ಯಾವುದೇ ಕಾರಣಕ್ಕೂ ಪರಿಶಿಷ್ಟ ಜಾತಿಗೆ ಸೇರಿಸಬಾರದು ಎಂಬುದು ನಮ್ಮ ಒತ್ತಾಯ ಕೂಡ ಆಗಿದೆ’ ಎಂದರು.

‌ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಸೆಪ್ಟೆಂಬರ್ 20 ರಂದು ಹುಮನಾಬಾದ್ ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ಹೇಳಿದ ದಲಿತ ಸಮುದಾಯದ ಮುಖಂಡರ ಜತೆಗೆ ಮಾತುಕತೆ ನಡೆಸಲಾಗುತ್ತಿದೆ. ಭಾನುವಾರ (ಸೆ.18) ತಾಲ್ಲೂಕಿನ ವಿವಿಧ ಗ್ರಾಮಗಳ ದಲಿತ ಮುಖಂಡರ ಸಮ್ಮುಖದಲ್ಲಿ ಸಭೆ ನಡೆಸಲಾಗುತ್ತದೆ. ಎಲ್ಲ ವಿಷಯಗಳ ಕುರಿತು ಸೂಕ್ತವಾಗಿ ಚರ್ಚೆ ಮಾಡಿ ಮಾತುಕತೆ ಮೂಲಕ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡಲಾಗುವುದು ಎಂದರು.

ದಲಿತ ಮುಖಂಡರಾದ ವಿಜಯಕುಮಾರ ನಾತೆ, ಮಲ್ಲಿಕಾರ್ಜುನ ಶರ್ಮಾ, ಪ್ರಭುರಾವ ತಾಳಮಡಗಿ, ನರಸಪ್ಪ ಪಸನೂರ್, ಮಲ್ಲಿಕಾರ್ಜುನ ಮಹೇಂದ್ರಕರ್, ಹುಲೆಪ್ಪ, ವೀರಪ್ಪ ಧುಮನಸೂರ್, ಸುರೇಶ ಘಾಂಗ್ರೆ ಹಾಗೂ ದೇವೇಂದ್ರ ಹಳ್ಳಿಖೇಡ(ಕೆ) ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT