ಬೀದರ್: ವಿಶ್ವ ಬಾಯಿ ಆರೋಗ್ಯ ದಿನದ ಅಂಗವಾಗಿ ಎಸ್.ಬಿ. ಪಾಟೀಲ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ವತಿಯಿಂದ ನೌಬಾದ್ನಲ್ಲಿ ಬಾಯಿ ಆರೋಗ್ಯ ಜಾಗೃತಿ ಜಾಥಾ ನಡೆಯಿತು.
ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಕೈಯಲ್ಲಿ ಫಲಕಗಳನ್ನು ಹಿಡಿದುಕೊಂಡು, ಘೋಷಣೆ ಕೂಗುತ್ತ ಜಾಥಾ ನಡೆಸಿದರು. ಪ್ರಾಚಾರ್ಯ ಶೈಲೇಂದ್ರ ಮಾಶಾಳಕರ್, ಡಾ. ಶರತ್ಚಂದ್ರ ಪಾಟೀಲ, ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.