ಶನಿವಾರ, ಏಪ್ರಿಲ್ 1, 2023
23 °C

ನ್ಯಾಯಾಲಯಗಳಲ್ಲಿ ರಾಷ್ಟ್ರ ಧ್ವಜಾರೋಹಣಕ್ಕೆ ಆದೇಶಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಸೆಪ್ಟೆಂಬರ್ 17 ರಂದು ಆಚರಿಸಲಾಗುವ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಸಂದರ್ಭದಲ್ಲಿ ನ್ಯಾಯಾಲಯಗಳಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಲು ಆದೇಶಿಸಬೇಕು ಎಂದು ಭಾರತ ಸಂರಕ್ಷಣಾ ಸಮಿತಿ ಅಧ್ಯಕ್ಷ ಶಿವಶರಣಪ್ಪ ವಾಲಿ ಮನವಿ ಮಾಡಿದ್ದಾರೆ.

ದೇಶಕ್ಕೆ ಸ್ವಾತಂತ್ರ್ಯ ದೊರೆತ 13 ತಿಂಗಳ 2 ದಿನಗಳ ನಂತರ ಈ ಭಾಗಕ್ಕೆ ಸ್ವಾತಂತ್ರ್ಯ ಲಭಿಸಿತ್ತು. ಹೀಗಾಗಿ ಸೆಪ್ಟೆಂಬರ್ 17 ರಂದು ವಿಮೋಚನಾ ದಿನ ಆಚರಿಸುತ್ತ ಬರಲಾಗುತ್ತಿದೆ. ಆದರೆ, ಅಂದು ಕಲ್ಯಾಣ ಕರ್ನಾಟಕ ಭಾಗದ ನ್ಯಾಯಾಲಯಗಳಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡುತ್ತಿಲ್ಲ ಎಂದು ರಾಜ್ಯಪಾಲರಿಗೆ ಬರೆದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಈ ಭಾಗದ ನಾಗರಿಕರ ಭಾವನೆಗಳಿಗೆ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೂ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿ, ಸೆ.17 ರಂದು ಕಲ್ಯಾಣ ಕರ್ನಾಟಕದ ಎಲ್ಲ ನ್ಯಾಯಾಲಯಗಳಲ್ಲಿ ಧ್ವಜಾರೋಹಣಕ್ಕೆ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು ಎಂದು ಕೋರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.