<p>ಬೀದರ್: ಸೆಪ್ಟೆಂಬರ್ 17 ರಂದು ಆಚರಿಸಲಾಗುವ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಸಂದರ್ಭದಲ್ಲಿ ನ್ಯಾಯಾಲಯಗಳಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಲು ಆದೇಶಿಸಬೇಕು ಎಂದು ಭಾರತ ಸಂರಕ್ಷಣಾ ಸಮಿತಿ ಅಧ್ಯಕ್ಷ ಶಿವಶರಣಪ್ಪ ವಾಲಿ ಮನವಿ ಮಾಡಿದ್ದಾರೆ.</p>.<p>ದೇಶಕ್ಕೆ ಸ್ವಾತಂತ್ರ್ಯ ದೊರೆತ 13 ತಿಂಗಳ 2 ದಿನಗಳ ನಂತರ ಈ ಭಾಗಕ್ಕೆ ಸ್ವಾತಂತ್ರ್ಯ ಲಭಿಸಿತ್ತು. ಹೀಗಾಗಿ ಸೆಪ್ಟೆಂಬರ್ 17 ರಂದು ವಿಮೋಚನಾ ದಿನ ಆಚರಿಸುತ್ತ ಬರಲಾಗುತ್ತಿದೆ. ಆದರೆ, ಅಂದು ಕಲ್ಯಾಣ ಕರ್ನಾಟಕ ಭಾಗದ ನ್ಯಾಯಾಲಯಗಳಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡುತ್ತಿಲ್ಲ ಎಂದು ರಾಜ್ಯಪಾಲರಿಗೆ ಬರೆದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.</p>.<p>ಈ ಭಾಗದ ನಾಗರಿಕರ ಭಾವನೆಗಳಿಗೆ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.<br />ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೂ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿ, ಸೆ.17 ರಂದು ಕಲ್ಯಾಣ ಕರ್ನಾಟಕದ ಎಲ್ಲ ನ್ಯಾಯಾಲಯಗಳಲ್ಲಿ ಧ್ವಜಾರೋಹಣಕ್ಕೆ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಸೆಪ್ಟೆಂಬರ್ 17 ರಂದು ಆಚರಿಸಲಾಗುವ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಸಂದರ್ಭದಲ್ಲಿ ನ್ಯಾಯಾಲಯಗಳಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಲು ಆದೇಶಿಸಬೇಕು ಎಂದು ಭಾರತ ಸಂರಕ್ಷಣಾ ಸಮಿತಿ ಅಧ್ಯಕ್ಷ ಶಿವಶರಣಪ್ಪ ವಾಲಿ ಮನವಿ ಮಾಡಿದ್ದಾರೆ.</p>.<p>ದೇಶಕ್ಕೆ ಸ್ವಾತಂತ್ರ್ಯ ದೊರೆತ 13 ತಿಂಗಳ 2 ದಿನಗಳ ನಂತರ ಈ ಭಾಗಕ್ಕೆ ಸ್ವಾತಂತ್ರ್ಯ ಲಭಿಸಿತ್ತು. ಹೀಗಾಗಿ ಸೆಪ್ಟೆಂಬರ್ 17 ರಂದು ವಿಮೋಚನಾ ದಿನ ಆಚರಿಸುತ್ತ ಬರಲಾಗುತ್ತಿದೆ. ಆದರೆ, ಅಂದು ಕಲ್ಯಾಣ ಕರ್ನಾಟಕ ಭಾಗದ ನ್ಯಾಯಾಲಯಗಳಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡುತ್ತಿಲ್ಲ ಎಂದು ರಾಜ್ಯಪಾಲರಿಗೆ ಬರೆದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.</p>.<p>ಈ ಭಾಗದ ನಾಗರಿಕರ ಭಾವನೆಗಳಿಗೆ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.<br />ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೂ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿ, ಸೆ.17 ರಂದು ಕಲ್ಯಾಣ ಕರ್ನಾಟಕದ ಎಲ್ಲ ನ್ಯಾಯಾಲಯಗಳಲ್ಲಿ ಧ್ವಜಾರೋಹಣಕ್ಕೆ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>