ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತಗಟ್ಟೆ ಮಟ್ಟದಲ್ಲಿ ಪಕ್ಷ ಸಂಘಟಿಸಿ: ಡಾ. ಶೈಲೇಂದ್ರ ಬೆಲ್ದಾಳೆ

Last Updated 26 ಸೆಪ್ಟೆಂಬರ್ 2021, 15:52 IST
ಅಕ್ಷರ ಗಾತ್ರ

ಜನವಾಡ: ಬಿಜೆಪಿ ಕಾರ್ಯಕರ್ತರು ಮತಗಟ್ಟೆ ಮಟ್ಟದಲ್ಲಿ ಪಕ್ಷದ ಸಂಘಟನೆ ಬಲಪಡಿಸಲು ಶ್ರಮಿಸಬೇಕು ಎಂದು ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.

ಬೀದರ್ ತಾಲ್ಲೂಕಿನ ಚಿಟ್ಟಾ ಗ್ರಾಮದ ಬೂತ್ ಸಂಖ್ಯೆ 61 ರ ಅಧ್ಯಕ್ಷ ಶಿವಕುಮಾರ ಮಾಮಡಗಿ ಅವರ ಮನೆಯಲ್ಲಿ ನಡೆದ ಪಂಡಿತ ದೀನದಯಾಳ್ ಉಪಾಧ್ಯಾಯ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮತಗಟ್ಟೆ ಮಟ್ಟದಲ್ಲಿ ನಿರಂತರ ವಿವಿಧ ಚಟುವಟಿಕೆಗಳನ್ನು ನಡೆಸಬೇಕು ಎಂದು ಸಲಹೆ ಮಾಡಿದರು.

ಮತಗಟ್ಟೆ ಅಧ್ಯಕ್ಷರ ಮನೆ ಗೋಡೆ ಮೇಲೆ ನಾಮಫಲಕ ಅಳವಡಿಸಬೇಕು. ಕಾರ್ಯಕರ್ತರ ಮನೆ ಮೇಲೆ ಪಕ್ಷದ ಧ್ವಜ ಹಾರಿಸಬೇಕು ಎಂದು ತಿಳಿಸಿದರು.

ಬೀದರ್ ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ, ಮುಖಂಡರಾದ ರಾಜು ಮಾಮಡಗಿ, ಮಲ್ಲಿಕಾರ್ಜುನ, ಶಿವಾಜಿರಾವ್ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT