<p><strong>ಬೀದರ್: </strong>ಮಕ್ಕಳಿಗೆ ವಿವಿಧ ಕಲೆಗಳ ತರಬೇತಿ ನೀಡಲು ತಾಲ್ಲೂಕು ಮಟ್ಟದಲ್ಲೂ ಬೇಸಿಗೆ ಶಿಬಿರ ಆಯೋಜಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ರವೀಂದ್ರ ಎಸ್. ರತ್ನಾಕರ್ ಹೇಳಿದರು.</p>.<p>ರಾಜ್ಯ ಬಾಲ ಭವನ ಸಂಸ್ಥೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ವತಿಯಿಂದ ನಗರದ ಬಾಲ ಭವನದಲ್ಲಿ ಆಯೋಜಿಸಿರುವ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕೋವಿಡ್ ಕಾರಣ ಎರಡು ವರ್ಷ ಬೇಸಿಗೆ ಶಿಬಿರಗಳನ್ನು ರದ್ದುಪಡಿಸಲಾಗಿತ್ತು. ಈ ವರ್ಷ ಮತ್ತೆ ಶುರು ಮಾಡಲಾಗಿದೆ. ಬೇಸಿಗೆ ಶಿಬಿರಗಳು ಮಕ್ಕಳಿಗೆ ವಿವಿಧ ಕಲೆಗಳನ್ನು ಕಲಿಯಲು ಸಹಕಾರಿಯಾಗಿವೆ ಎಂದು ತಿಳಿಸಿದರು.</p>.<p>ಬಾಲ ಭವನ ಸಮಿತಿಯ ಕಾರ್ಯಕ್ರಮ ಸಂಯೋಜಕ ಸೂರ್ಯಕಾಂತ ಮೋರೆ ಮಾತನಾಡಿ, ಮೇ 6 ರ ವರೆಗೆ ಪ್ರತಿ ದಿನ ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ರ ವರೆಗೆ ಶಿಬಿರ ನಡೆಯಲಿದೆ ಎಂದು ಹೇಳಿದರು.</p>.<p>ಶಿಬಿರದಲ್ಲಿ ಪರಿಣಿತರು ಮಕ್ಕಳಿಗೆ ಚಿತ್ರಕಲೆ, ಕರಕುಶಲ ಕಲೆ, ಜೇಡಿಮಣ್ಣಿನ ಕಲೆ, ಯೋಗಾಸನ, ಕರಾಟೆ, ಸಮೂಹ ನೃತ್ಯ, ಸಮೂಹ ಸಂಗೀತ, ಕಸೂತಿ, ಮೆಹಂದಿ ತರಬೇತಿ ನೀಡಲಿದ್ದಾರೆ ಎಂದು ತಿಳಿಸಿದರು.</p>.<p>ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹಾಂತೇಶ ಭಜಂತ್ರಿ, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾದ ಡಾ. ಧನಲಕ್ಷ್ಮಿ ಪಾಟೀಲ, ಮಂಜುಳಾ ಎಂ. ಮಾತನಾಡಿದರು.</p>.<p>ಯೋಗ ಶಿಕ್ಷಕ ಧೋಂಡಿರಾಮ ಚಾಂದಿವಾಲೆ, ಕಸೂತಿ ತರಬೇತಿಗಾರ್ತಿ ಸುಮಲತಾ ದೇವೇಂದ್ರ ಮಾಳಗೆ, ಜಾನಪದ ಕಲಾವಿದ ಶೇಷಪ್ಪ ಚಿಟ್ಟಾ, ಮುಖ್ಯಶಿಕ್ಷಕ ಮಲ್ಲಿಕಾರ್ಜುನ ಮನ್ನಳ್ಳಿ, ಅಂಬಿಕಾ ಉಪಸ್ಥಿತರಿದ್ದರು.</p>.<p>ಬಾಲಭವನ ಕಚೇರಿಯ ಸಹಾಯಕ ಸುವಿತ್ ಎಸ್. ಮೋರೆ ವಂದಿಸಿದರು. 60 ಮಕ್ಕಳು ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಮಕ್ಕಳಿಗೆ ವಿವಿಧ ಕಲೆಗಳ ತರಬೇತಿ ನೀಡಲು ತಾಲ್ಲೂಕು ಮಟ್ಟದಲ್ಲೂ ಬೇಸಿಗೆ ಶಿಬಿರ ಆಯೋಜಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ರವೀಂದ್ರ ಎಸ್. ರತ್ನಾಕರ್ ಹೇಳಿದರು.</p>.<p>ರಾಜ್ಯ ಬಾಲ ಭವನ ಸಂಸ್ಥೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ವತಿಯಿಂದ ನಗರದ ಬಾಲ ಭವನದಲ್ಲಿ ಆಯೋಜಿಸಿರುವ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕೋವಿಡ್ ಕಾರಣ ಎರಡು ವರ್ಷ ಬೇಸಿಗೆ ಶಿಬಿರಗಳನ್ನು ರದ್ದುಪಡಿಸಲಾಗಿತ್ತು. ಈ ವರ್ಷ ಮತ್ತೆ ಶುರು ಮಾಡಲಾಗಿದೆ. ಬೇಸಿಗೆ ಶಿಬಿರಗಳು ಮಕ್ಕಳಿಗೆ ವಿವಿಧ ಕಲೆಗಳನ್ನು ಕಲಿಯಲು ಸಹಕಾರಿಯಾಗಿವೆ ಎಂದು ತಿಳಿಸಿದರು.</p>.<p>ಬಾಲ ಭವನ ಸಮಿತಿಯ ಕಾರ್ಯಕ್ರಮ ಸಂಯೋಜಕ ಸೂರ್ಯಕಾಂತ ಮೋರೆ ಮಾತನಾಡಿ, ಮೇ 6 ರ ವರೆಗೆ ಪ್ರತಿ ದಿನ ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ರ ವರೆಗೆ ಶಿಬಿರ ನಡೆಯಲಿದೆ ಎಂದು ಹೇಳಿದರು.</p>.<p>ಶಿಬಿರದಲ್ಲಿ ಪರಿಣಿತರು ಮಕ್ಕಳಿಗೆ ಚಿತ್ರಕಲೆ, ಕರಕುಶಲ ಕಲೆ, ಜೇಡಿಮಣ್ಣಿನ ಕಲೆ, ಯೋಗಾಸನ, ಕರಾಟೆ, ಸಮೂಹ ನೃತ್ಯ, ಸಮೂಹ ಸಂಗೀತ, ಕಸೂತಿ, ಮೆಹಂದಿ ತರಬೇತಿ ನೀಡಲಿದ್ದಾರೆ ಎಂದು ತಿಳಿಸಿದರು.</p>.<p>ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹಾಂತೇಶ ಭಜಂತ್ರಿ, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾದ ಡಾ. ಧನಲಕ್ಷ್ಮಿ ಪಾಟೀಲ, ಮಂಜುಳಾ ಎಂ. ಮಾತನಾಡಿದರು.</p>.<p>ಯೋಗ ಶಿಕ್ಷಕ ಧೋಂಡಿರಾಮ ಚಾಂದಿವಾಲೆ, ಕಸೂತಿ ತರಬೇತಿಗಾರ್ತಿ ಸುಮಲತಾ ದೇವೇಂದ್ರ ಮಾಳಗೆ, ಜಾನಪದ ಕಲಾವಿದ ಶೇಷಪ್ಪ ಚಿಟ್ಟಾ, ಮುಖ್ಯಶಿಕ್ಷಕ ಮಲ್ಲಿಕಾರ್ಜುನ ಮನ್ನಳ್ಳಿ, ಅಂಬಿಕಾ ಉಪಸ್ಥಿತರಿದ್ದರು.</p>.<p>ಬಾಲಭವನ ಕಚೇರಿಯ ಸಹಾಯಕ ಸುವಿತ್ ಎಸ್. ಮೋರೆ ವಂದಿಸಿದರು. 60 ಮಕ್ಕಳು ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>