<p><strong>ಭಾಲ್ಕಿ: </strong>ಬೀದರ್ ಜಿಲ್ಲೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು 10 ಆಮ್ಲಜನಕ ಸಾಂದ್ರಕ ಯಂತ್ರ (ಆಕ್ಸಿಜನ್ ಕಾನ್ಸೆಂಟ್ರೇಟರ್ ಮಷಿನ್) ಗಳನ್ನು ಕೊಡುಗೆ ನೀಡಿದ್ದಾರೆ. ಬೀದರ್ನ ಬ್ರಿಮ್ಸ್ ಮತ್ತು ಭಾಲ್ಕಿಯ ಸಾರ್ವಜನಿಕ ಆಸ್ಪತ್ರೆಗೆ ತಲಾ 5 ಯಂತ್ರಗಳನ್ನು ಹಸ್ತಾಂತರ ಮಾಡಿದ್ದಾರೆ.</p>.<p>ಬೀದರ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರಿಗೆ ಸಾಗರ ಈಶ್ವರ ಖಂಡ್ರೆ 5 ಆಮ್ಲಜನಕ ಸಾಂದ್ರಕ ಯಂತ್ರಗಳನ್ನು ಹಸ್ತಾಂತರಿಸಿದರು.</p>.<p>ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟೆ ಮಾತನಾಡಿ, ‘ಖಾಸಗಿ ಆಸ್ಪತ್ರೆಯಲ್ಲಿ ಒಬ್ಬ ರೋಗಿಗೆ ಪ್ರತಿದಿನ ಆಮ್ಲಜನಕ ಚಿಕಿತ್ಸೆಗೆ ಸುಮಾರು ₹20 ಸಾವಿರ ಬಿಲ್ ಮಾಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯ ಸೋಂಕಿತರ ಪ್ರಾಣ ರಕ್ಷಣೆಗಾಗಿ ಹೆಚ್ಚುವರಿ ರೆಮ್ಡಿಸಿವಿರ್, ಆಮ್ಲಜನಕ, ಬೆಡ್ ವ್ಯವಸ್ಥೆ ಮಾಡಲು ಈಶ್ವರ ಖಂಡ್ರೆ ಅವರು ಹಗಲಿರುಳು ಶ್ರಮ ವಹಿಸುತ್ತಿದ್ದಾರೆ’ ಎಂದರು.</p>.<p>‘ಸೋಂಕಿತರಿಗೆ ಆಮ್ಲಜನಕ ಕೊರತೆ ನೀಗಿಸಲು ವಾತಾವರಣದಲ್ಲಿನ ಆಮ್ಲಜನಕವನ್ನು ಶುದ್ಧೀಕರಿಸಿ ರೋಗಿಗಳಿಗೆ ನೀಡಬಹುದಾದ 10 ಆಮ್ಲಜನಕ ಸಾಂದ್ರಕ ಯಂತ್ರ ನೀಡಲಾಗಿದೆ. ಈ ಸಾಂದ್ರಕಗಳು ಸೋಂಕಿತರಿಗಷ್ಟೇ ಅಲ್ಲ, ಕೋವಿಡ್ ನಿಂದ ಗುಣಮುಖರಾಗಿ ಮನೆಗೆ ಮರಳಿದ ಮೇಲೂ ಉಸಿರಾಟದ ಸಮಸ್ಯೆ ಎದುರಿಸುತ್ತಿರುವವರಿಗೆ 2 ರಿಂದ 4 ಲೀಟರ್ ಪ್ರಾಣವಾಯು ಅಗತ್ಯ ಇರುತ್ತದೆ. ಈ ಸಾಂದ್ರಕ ಅವರ ಜೀವ ರಕ್ಷಣೆಗೆ ನೆರವಾಗುತ್ತದೆ’ ಎಂದು ಶಾಸಕ ಈಶ್ವರ ಖಂಡ್ರೆ ತಿಳಿಸಿದ್ದಾರೆ.</p>.<p>‘ಭಾಲ್ಕಿ ಆಸ್ಪತ್ರೆಗೆ ಈಗಾಗಲೇ ವೈಯಕ್ತಿಕವಾಗಿ 100 ಆಮ್ಲಜನಕ ಸಿಲಿಂಡರ್ಗಳ ವ್ಯವಸ್ಥೆ, 50 ಆಮ್ಲಜನಕ ಹಾಸಿಗೆಗಳ ವ್ಯವಸ್ಥೆ ಮಾಡಿದ್ದೇನೆ. ಕ್ಷೇತ್ರದ ಜನರ ಅನುಕೂಲಕ್ಕಾಗಿ ದಿನದ 24 ಗಂಟೆ ವಾರದ ಏಳೂ ದಿನ ಕಾರ್ಯ ನಿರ್ವಹಿಸಿ, ರೋಗಿಗಳನ್ನು ಆಸ್ಪತ್ರೆಗೆ ಸುರಕ್ಷಿತವಾಗಿ ಕರೆತರಲು ಅನುಕೂಲವಾಗುವಂತೆ ಉಚಿತ 2 ಅಂಬುಲೆನ್ಸ್ಗಳನ್ನು ಕೊಟ್ಟಿದ್ದೇನೆ’ ಎಂದು ತಿಳಿಸಿದ್ದಾರೆ.</p>.<p>ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಪ್ರಕಾಶ ಮಾಶೆಟ್ಟೆ, ಪ್ರಮುಖರಾದ ಶಂಕರ ದೊಡ್ಡಿ, ಮನ್ನಾನಸೇಠ್, ಧನರಾಜ ಹಂಗರಗಿ, ವಿಲಾಸ ಮೊರೆ, ಶಶಿಧರ ಕೋಸಂಬೆ, ಕೈಲಾಸ ಭಾವಿಕಟ್ಟಿ, ಮುಖ್ಯ ವೈದ್ಯಾಧಿಕಾರಿ ಡಾ.ಅಬ್ದುಲ್ ಖಾದರ್, ತಾಲ್ಲೂಕು ವೈದ್ಯಾಧಿಕಾರಿ ಜ್ಞಾನೇಶ್ವರ ನಿರಗುಡೆ, ಡಾ.ಶಶಿಕಾಂತ ಭೂರೆ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ: </strong>ಬೀದರ್ ಜಿಲ್ಲೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು 10 ಆಮ್ಲಜನಕ ಸಾಂದ್ರಕ ಯಂತ್ರ (ಆಕ್ಸಿಜನ್ ಕಾನ್ಸೆಂಟ್ರೇಟರ್ ಮಷಿನ್) ಗಳನ್ನು ಕೊಡುಗೆ ನೀಡಿದ್ದಾರೆ. ಬೀದರ್ನ ಬ್ರಿಮ್ಸ್ ಮತ್ತು ಭಾಲ್ಕಿಯ ಸಾರ್ವಜನಿಕ ಆಸ್ಪತ್ರೆಗೆ ತಲಾ 5 ಯಂತ್ರಗಳನ್ನು ಹಸ್ತಾಂತರ ಮಾಡಿದ್ದಾರೆ.</p>.<p>ಬೀದರ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರಿಗೆ ಸಾಗರ ಈಶ್ವರ ಖಂಡ್ರೆ 5 ಆಮ್ಲಜನಕ ಸಾಂದ್ರಕ ಯಂತ್ರಗಳನ್ನು ಹಸ್ತಾಂತರಿಸಿದರು.</p>.<p>ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟೆ ಮಾತನಾಡಿ, ‘ಖಾಸಗಿ ಆಸ್ಪತ್ರೆಯಲ್ಲಿ ಒಬ್ಬ ರೋಗಿಗೆ ಪ್ರತಿದಿನ ಆಮ್ಲಜನಕ ಚಿಕಿತ್ಸೆಗೆ ಸುಮಾರು ₹20 ಸಾವಿರ ಬಿಲ್ ಮಾಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯ ಸೋಂಕಿತರ ಪ್ರಾಣ ರಕ್ಷಣೆಗಾಗಿ ಹೆಚ್ಚುವರಿ ರೆಮ್ಡಿಸಿವಿರ್, ಆಮ್ಲಜನಕ, ಬೆಡ್ ವ್ಯವಸ್ಥೆ ಮಾಡಲು ಈಶ್ವರ ಖಂಡ್ರೆ ಅವರು ಹಗಲಿರುಳು ಶ್ರಮ ವಹಿಸುತ್ತಿದ್ದಾರೆ’ ಎಂದರು.</p>.<p>‘ಸೋಂಕಿತರಿಗೆ ಆಮ್ಲಜನಕ ಕೊರತೆ ನೀಗಿಸಲು ವಾತಾವರಣದಲ್ಲಿನ ಆಮ್ಲಜನಕವನ್ನು ಶುದ್ಧೀಕರಿಸಿ ರೋಗಿಗಳಿಗೆ ನೀಡಬಹುದಾದ 10 ಆಮ್ಲಜನಕ ಸಾಂದ್ರಕ ಯಂತ್ರ ನೀಡಲಾಗಿದೆ. ಈ ಸಾಂದ್ರಕಗಳು ಸೋಂಕಿತರಿಗಷ್ಟೇ ಅಲ್ಲ, ಕೋವಿಡ್ ನಿಂದ ಗುಣಮುಖರಾಗಿ ಮನೆಗೆ ಮರಳಿದ ಮೇಲೂ ಉಸಿರಾಟದ ಸಮಸ್ಯೆ ಎದುರಿಸುತ್ತಿರುವವರಿಗೆ 2 ರಿಂದ 4 ಲೀಟರ್ ಪ್ರಾಣವಾಯು ಅಗತ್ಯ ಇರುತ್ತದೆ. ಈ ಸಾಂದ್ರಕ ಅವರ ಜೀವ ರಕ್ಷಣೆಗೆ ನೆರವಾಗುತ್ತದೆ’ ಎಂದು ಶಾಸಕ ಈಶ್ವರ ಖಂಡ್ರೆ ತಿಳಿಸಿದ್ದಾರೆ.</p>.<p>‘ಭಾಲ್ಕಿ ಆಸ್ಪತ್ರೆಗೆ ಈಗಾಗಲೇ ವೈಯಕ್ತಿಕವಾಗಿ 100 ಆಮ್ಲಜನಕ ಸಿಲಿಂಡರ್ಗಳ ವ್ಯವಸ್ಥೆ, 50 ಆಮ್ಲಜನಕ ಹಾಸಿಗೆಗಳ ವ್ಯವಸ್ಥೆ ಮಾಡಿದ್ದೇನೆ. ಕ್ಷೇತ್ರದ ಜನರ ಅನುಕೂಲಕ್ಕಾಗಿ ದಿನದ 24 ಗಂಟೆ ವಾರದ ಏಳೂ ದಿನ ಕಾರ್ಯ ನಿರ್ವಹಿಸಿ, ರೋಗಿಗಳನ್ನು ಆಸ್ಪತ್ರೆಗೆ ಸುರಕ್ಷಿತವಾಗಿ ಕರೆತರಲು ಅನುಕೂಲವಾಗುವಂತೆ ಉಚಿತ 2 ಅಂಬುಲೆನ್ಸ್ಗಳನ್ನು ಕೊಟ್ಟಿದ್ದೇನೆ’ ಎಂದು ತಿಳಿಸಿದ್ದಾರೆ.</p>.<p>ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಪ್ರಕಾಶ ಮಾಶೆಟ್ಟೆ, ಪ್ರಮುಖರಾದ ಶಂಕರ ದೊಡ್ಡಿ, ಮನ್ನಾನಸೇಠ್, ಧನರಾಜ ಹಂಗರಗಿ, ವಿಲಾಸ ಮೊರೆ, ಶಶಿಧರ ಕೋಸಂಬೆ, ಕೈಲಾಸ ಭಾವಿಕಟ್ಟಿ, ಮುಖ್ಯ ವೈದ್ಯಾಧಿಕಾರಿ ಡಾ.ಅಬ್ದುಲ್ ಖಾದರ್, ತಾಲ್ಲೂಕು ವೈದ್ಯಾಧಿಕಾರಿ ಜ್ಞಾನೇಶ್ವರ ನಿರಗುಡೆ, ಡಾ.ಶಶಿಕಾಂತ ಭೂರೆ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>