ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಮ್ಲಜನಕ ಸಾಂದ್ರಕ ಯಂತ್ರ ದೇಣಿಗೆ

Last Updated 21 ಮೇ 2021, 4:18 IST
ಅಕ್ಷರ ಗಾತ್ರ

ಭಾಲ್ಕಿ: ಇಲ್ಲಿಯ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಗುರುವಾರ ಉಮಾದೇವಿ ಪ್ರಕಾಶ ಖಂಡ್ರೆ ಫೌಂಡೇಶನ್ ಸಹಕಾರದೊಂದಿಗೆ ಮಾಜಿ ಶಾಸಕ ಪ್ರಕಾಶ ಖಂಡ್ರೆ 2 ಆಮ್ಲಜನಕ ಸಾಂದ್ರಕ ಯಂತ್ರಗಳನ್ನು ಕೊಡುಗೆಯಾಗಿ ನೀಡಿದರು.

ಯುವ ಮುಖಂಡ ಪ್ರಸನ್ನ ಪ್ರಕಾಶ ಖಂಡ್ರೆ ಮಾತನಾಡಿ, ‘ತಾಲ್ಲೂಕಿನ ಜನರಿಗೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿ ಆಗಲೆಂದು 2 ಆಮ್ಲಜನಕ ಸಾಂದ್ರಕಗಳನ್ನು ಕೊಡುಗೆಯಾಗಿ ನೀಡಿದ್ದೇವೆ. ಈ ಮುಂಚೆಯೂ ಕೂಡಾ ಆಸ್ಪತ್ರೆ ಸೇರಿದಂತೆ ವಿವಿಧ ಇಲಾಖೆ, ಜನರಿಗೆ ಮಾಸ್ಕ್‌, ಸ್ಯಾನಿಟೈಸರ್ ನೀಡಲಾಗಿದೆ. ಇನ್ನು ಮುಂದೆಯೂ ಜನರ ಆರೋಗ್ಯದ ದೃಷ್ಟಿಯಿಂದ ಸಹಾಯ ಮಾಡಲಾಗುವುದು’ ಎಂದರು.

ಡಿವೈಎಸ್‌ಪಿ ದೇವರಾಜ ಬಿ. ಮಾತನಾಡಿದರು.

ಎಪಿಎಂಸಿ ಸದಸ್ಯ ಸುಭಾಶ ಖಂಡ್ರೆ, ಜಗದೀಶ್ ಖಂಡ್ರೆ, ಗುರುಪ್ರಸಾದ ಖಂಡ್ರೆ, ಅಮರ್ ಜಲ್ದೆ, ಗೋವಿಂದರಾವ್‌ ಬಿರಾದಾರ, ಜೈಕಿಶನ್ ಬಿಯಾನಿ, ಯೋಗೇಶ ಅಷ್ಟುರೆ, ರಾಜಕುಮಾರ ಜಲ್ದೆ, ಸಂತೋಷ ಭೂಸಗುಂಡೇ, ತುಕಾರಾಮ ಹುಣಚನಾಳೆ, ತಾಲ್ಲೂಕು ವೈದ್ಯಾಧಿಕಾರಿ ಜ್ಞಾನೇಶ್ವರ ನಿರಾಗುಡೆ, ಮುಖ್ಯ ವೈದ್ಯಾಧಿಕಾರಿ ಅಬ್ದುಲ್ ಖಾದರ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT