ಇಲ್ಲಿಯ ಬಸವನಗರದಲ್ಲಿರುವ ಅರುಣೋದಯ ಶಾಲೆ ಅವರಣದಲ್ಲಿ ಕರ್ನಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ಕರ್ನಟಕ ರಾಜ್ಯ ಶಿಕ್ಷಕರ ವಿಕಾಸ ಪರಿಷತ್ತು, ಆರ್ಯಭಟ ಫೌಂಡೇಶನ್ ಹಾಗೂ ಚಾರಿಟಬಲ್ ಟ್ರಸ್ಟ್ ಹಾಗೂ ಹೃಷಿಕೇಶ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ವಿಶ್ವ ಓಜೋನ್ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಭೂಮಿ ಮೇಲಿನ ಜೀವಸತ್ವಗಳಿಗೆ ಓಜೋನ್ ರಕ್ಷಾ ಕವಚದಂತಿದೆ. ಸೂರ್ಯನಿಂದ ನೇರವಾಗಿ ಬರುವ ಹಾನಿಕಾರಣ ಕಿರಣಗಳಿಂದ ಪಾರು ಮಾಡುವ ಶಕ್ತಿ ಇದೆ, ಇಂದು ವಾಯು ಮಾಲಿನ್ಯದಿಂದ ಅದು ತೀರ ತೆಳುವಾಗುತ್ತ ಸಾಗಿದೆ’ ಎಂದು ತಿಳಿಸಿದರು.
ಮಾತೆ ಮಾಣಿಕೇಶ್ವರಿ ಕಾಲೇಜಿನ ಪ್ರಾಚಾರ್ಯ ಲೋಕೇಶ ಉಡಬಾಳೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ವಿಕಾಸ ಪರಿಷತ್ತಿನ ಕಾರ್ಯದರ್ಶಿ ಸಂಜೀವಕುಮಾರ ಸ್ವಾಮಿ ವಿಶೇಷ ಉಪನ್ಯಾಸ ನೀಡಿದರು.
ಹೃಷಿಕೇಶ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ರಾಜೇಂದ್ರ ಮಣಗೆರೆ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳ ತಜ್ಞ ಡಾ.ಆನಂದರಾವ್, ಕರುನಾಡು ವಿಜ್ಞಾನ ಅಕಾಡೆಮಿ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಥ ಬೆಳಕೆರೆ, ನವೀನ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಕಾಮಶೆಟ್ಟಿ ಚಿಕ್ಕಬಸೆ, ಪ್ರಗತಿ ಆರೋಗ್ಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಅರವಿಂದ ಕುಲಕರ್ಣಿ, ಭಾತಂಬ್ರಾ ವಂದೆ ಮಾತರಂ ಶಾಲೆ ಮುಖ್ಯ ಗುರು ರಾಜಕುಮಾರ ಬಿರಾದಾರ, ಶಿಕ್ಷಕರಾದ ಸುವರ್ಣಾ ಜಲಾದೆ, ಸುವರ್ಣಾ ಪಾಟೀಲ, ಸ್ವರೂಪಾರಾಣಿ, ಶಾರದಾ ಉಪ್ಪೆ, ಪುರುಷೋತ್ತಮ, ಆಕಾಶ, ಮಾರೂತೆಪ್ಪ ಇದ್ದರು.