ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪತ್ರಿಕಾ ವಿತರಕರ ಕಾರ್ಯ ಶ್ಲಾಘನೀಯ’

Last Updated 5 ಸೆಪ್ಟೆಂಬರ್ 2022, 2:42 IST
ಅಕ್ಷರ ಗಾತ್ರ

ಹುಮನಾಬಾದ್: ‘ಕೋವಿಡ್ ವೇಳೆ ಪತ್ರಿಕಾ ವಿತರಕರು ಪ್ರಾಣದ ಹಂಗು ತೊರೆದು ಓದುಗರಿಗೆ ಪತ್ರಿಕೆ ತಲುಪಿಸಿರುವುದು ಶ್ಲಾಘನೀಯ’ ಎಂದು ಪರಿಸರ ಪ್ರೇಮಿ ಶೈಲೇಂದ್ರ ಕಾವಡಿ ಹೇಳಿದರು.

ಪಟ್ಟಣದಲ್ಲಿ ಪತ್ರಿಕಾ ವಿತರಕರನ್ನು ಸನ್ಮಾನಿಸಿ ಮಾತನಾಡಿ,‘ಓದುಗರು ಪ್ರತಿ ತಿಂಗಳು ವಿತರಕರಿಗೆ ಹಣ ನೀಡಿ ಸಹಕರಿಸಬೇಕು’ ಎಂದರು.

ಹಿರಿಯ ಪತ್ರಿಕಾ ವಿತರಕ ಬಸವರಾಜ ಮಾತನಾಡಿ,‘ಸರ್ಕಾರ ಕೋವಿಡ್ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡಿದವರಿಗೆ ಸಹಕಾರ ನೀಡಿದೆ. ಪತ್ರಿಕಾ ವಿತರಕರೂ ಸಂಕಷ್ಟಗಳನ್ನು ಎದುರಿಸಿದ್ದೇವೆ. ಸರ್ಕಾರ ನಿರ್ಲಕ್ಷ್ಯ ಮಾಡುತ್ತಿರುವುದು ಬೇಸರದ ಸಂಗತಿ’ ಎಂದರು.

ನಾಗಭೂಷಣ, ರೇವಣಸಿದ್ದಪ್ಪ, ಪ್ರಶಾಂತ ಸೇರಿದಂತೆ ಹಲವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT