<p><strong>ಬೀದರ್</strong>: ‘ಕೇಂದ್ರ ಚುನಾವಣಾ ಆಯೋಗವು ನಡೆಸುತ್ತಿರುವ ಮತದಾರರ ಸಮಗ್ರ ವಿಶೇಷ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯು ಈಗ ದೇಶದಲ್ಲಿ ನಡೆಯುತ್ತಿರುವ ರಕ್ತರಹಿತ ರಾಜಕೀಯ ನರಮೇಧವಾಗಿದೆ’ ಎಂದು ಆರ್ಥಿಕ ತಜ್ಞ ಪರಕಾಲ ಪ್ರಭಾಕರ್ ಅವರು ಮಂಗಳವಾರ ಇಲ್ಲಿ ವ್ಯಾಖ್ಯಾನಿಸಿದರು.</p>.<p>ಎಸ್ಐಆರ್ ವಿರೋಧಿ ಜನಾಂದೋಲನ ಸಮಿತಿ ಬೀದರ್ ಘಟಕವು ಏರ್ಪಡಿಸಿದ್ದ ಚಿಂತನ ಮಂಥನ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ಎಸ್ಐಆರ್ ಮೂಲಕ ರಾಜಕೀಯ ಮತ್ತು ಸಾಮಾಜಿಕ ಅಸ್ಮಿತೆಯನ್ನು ಗುರಿ ಮಾಡಲಾಗುತ್ತಿದೆ. ಇದರ ಮೂಲಕ ಭಾರತವನ್ನು ಇಸ್ರೇಲೀಕರಣ ಮಾಡುವ ಹುನ್ನಾರ ನಡೆಸಲಾಗುತ್ತಿದೆ’ ಎಂದು ಆರೋಪಿಸಿದರು.</p>.<p>‘ಆಳುವ ಪಕ್ಷವೇ ಎಸ್ಐಆರ್ ಹೆಸರಿನಲ್ಲಿ ರಕ್ತರಹಿತ ರಾಜಕೀಯ ನರಮೇಧಕ್ಕೆ ಮುಂದಾಗಿದೆ. ಎಸ್ಐಆರ್ನಿಂದ ಜನ ಸಾಯುವುದಿಲ್ಲ. ಆದರೆ, ಅವರ ನಾಗರಿಕತ್ವ ಸಾಯಲಿದೆ. ಎಸ್ಐಆರ್ 2ನೇ ಹಂತದ ಪ್ರಕ್ರಿಯೆ ನಂತರ ದೇಶದಲ್ಲಿ 6.20 ಕೋಟಿ ಮತದಾರರು ಮತದಾನದ ಹಕ್ಕು ಕಳೆದುಕೊಳ್ಳಲಿದ್ದಾರೆ’ ಎಂದು ಎಚ್ಚರಿಸಿದರು.</p>.<p>‘ಜಗತ್ತಿನ 85 ರಾಷ್ಟ್ರಗಳಲ್ಲಿ ಇದಕ್ಕಿಂತ ಕಡಿಮೆ ಜನಸಂಖ್ಯೆ ಇದೆ. ಎಸ್ಐಆರ್ ಬಳಿಕ ಒಟ್ಟು 16.50 ಕೋಟಿ ಜನ ಮತದಾನದಿಂದ ವಂಚಿತರಾಗಲಿದ್ದು, ನಾಗರಿಕತ್ವ ಕಳೆದುಕೊಳ್ಳಲಿದ್ದಾರೆ. ಇದರಲ್ಲಿ ಹೆಚ್ಚಿನವರು ಮುಸ್ಲಿಮರು. ಇದಕ್ಕಾಗಿ ದೇಶದಲ್ಲಿ ಒಂದು ಹನಿ ಕೂಡಾ ರಕ್ತ ಹರಿಯುವುದಿಲ್ಲ’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ಕೇಂದ್ರ ಚುನಾವಣಾ ಆಯೋಗವು ನಡೆಸುತ್ತಿರುವ ಮತದಾರರ ಸಮಗ್ರ ವಿಶೇಷ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯು ಈಗ ದೇಶದಲ್ಲಿ ನಡೆಯುತ್ತಿರುವ ರಕ್ತರಹಿತ ರಾಜಕೀಯ ನರಮೇಧವಾಗಿದೆ’ ಎಂದು ಆರ್ಥಿಕ ತಜ್ಞ ಪರಕಾಲ ಪ್ರಭಾಕರ್ ಅವರು ಮಂಗಳವಾರ ಇಲ್ಲಿ ವ್ಯಾಖ್ಯಾನಿಸಿದರು.</p>.<p>ಎಸ್ಐಆರ್ ವಿರೋಧಿ ಜನಾಂದೋಲನ ಸಮಿತಿ ಬೀದರ್ ಘಟಕವು ಏರ್ಪಡಿಸಿದ್ದ ಚಿಂತನ ಮಂಥನ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ಎಸ್ಐಆರ್ ಮೂಲಕ ರಾಜಕೀಯ ಮತ್ತು ಸಾಮಾಜಿಕ ಅಸ್ಮಿತೆಯನ್ನು ಗುರಿ ಮಾಡಲಾಗುತ್ತಿದೆ. ಇದರ ಮೂಲಕ ಭಾರತವನ್ನು ಇಸ್ರೇಲೀಕರಣ ಮಾಡುವ ಹುನ್ನಾರ ನಡೆಸಲಾಗುತ್ತಿದೆ’ ಎಂದು ಆರೋಪಿಸಿದರು.</p>.<p>‘ಆಳುವ ಪಕ್ಷವೇ ಎಸ್ಐಆರ್ ಹೆಸರಿನಲ್ಲಿ ರಕ್ತರಹಿತ ರಾಜಕೀಯ ನರಮೇಧಕ್ಕೆ ಮುಂದಾಗಿದೆ. ಎಸ್ಐಆರ್ನಿಂದ ಜನ ಸಾಯುವುದಿಲ್ಲ. ಆದರೆ, ಅವರ ನಾಗರಿಕತ್ವ ಸಾಯಲಿದೆ. ಎಸ್ಐಆರ್ 2ನೇ ಹಂತದ ಪ್ರಕ್ರಿಯೆ ನಂತರ ದೇಶದಲ್ಲಿ 6.20 ಕೋಟಿ ಮತದಾರರು ಮತದಾನದ ಹಕ್ಕು ಕಳೆದುಕೊಳ್ಳಲಿದ್ದಾರೆ’ ಎಂದು ಎಚ್ಚರಿಸಿದರು.</p>.<p>‘ಜಗತ್ತಿನ 85 ರಾಷ್ಟ್ರಗಳಲ್ಲಿ ಇದಕ್ಕಿಂತ ಕಡಿಮೆ ಜನಸಂಖ್ಯೆ ಇದೆ. ಎಸ್ಐಆರ್ ಬಳಿಕ ಒಟ್ಟು 16.50 ಕೋಟಿ ಜನ ಮತದಾನದಿಂದ ವಂಚಿತರಾಗಲಿದ್ದು, ನಾಗರಿಕತ್ವ ಕಳೆದುಕೊಳ್ಳಲಿದ್ದಾರೆ. ಇದರಲ್ಲಿ ಹೆಚ್ಚಿನವರು ಮುಸ್ಲಿಮರು. ಇದಕ್ಕಾಗಿ ದೇಶದಲ್ಲಿ ಒಂದು ಹನಿ ಕೂಡಾ ರಕ್ತ ಹರಿಯುವುದಿಲ್ಲ’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>